24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

ಉಜಿರೆ: ಆಚರಣೆಗಳ ವೈಜ್ಞಾನಿಕ ಕಾರಣ ತಿಳಿದುಕೊಂಡು ಸಂಸ್ಕೃತಿ ಉಳಿಸಬೇಕಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ರಂಗ ನಿರ್ದೇಶಕ ಯಶವಂತ್ ಹೇಳಿದರು.
ಉಜಿರೆಯ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತುಳು ಸಂಸ್ಕೃತಿ ಕುರಿತ ‘ಆಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕೃಷಿ ಅವಲಂಬಿತ ತುಳುನಾಡಿನ ಎಲ್ಲಾ ಹಬ್ಬಗಳಿಗೂ ಕೃಷಿಯು ಮೂಲವಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಹಲವಾರು ಆಚರಣೆಗಳು ಬೆಳೆದು ಬಂದಿವೆ. ಆಟಿ ತಿಂಗಳಿನಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಯದೇ ಪ್ರಕೃತಿಯನ್ನು ಆರಾಧಿಸುವ ವಿಶಿಷ್ಟ ಪದ್ಧತಿ ಇದೆ. ಎಲ್ಲ ಆಚರಣೆಗಳ ಹಿಂದೆ ವೈಜ್ಞಾನಿಕ ಕಾರಣಗಳಿವೆ ಎಂದರು.

ಮುಖ್ಯ ಶಿಕ್ಷಕಿ ವಿದ್ಯಾಲಕ್ಷ್ಮೀ ಅವರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ವರ್ಧನ್ ಜೈನ್ ತುಳು ಗಾದೆಗಳ ವಾಚನ ಮಾಡಿದರು ಹಾಗೂ ವಿವಿಧ ತರಗತಿ ವಿದ್ಯಾರ್ಥಿಗಳು ತುಳುಗಾದೆಗಳು ಹಾಗೂ ಅರ್ಥಗಳನ್ನು ವಾಚಿಸಿದರು.

ವಿದ್ಯಾರ್ಥಿನಿ ತಸ್ಮಯಿ ಅವರು ಆಟಿ ತಿಂಗಳ ಆಚರಣೆಗಳ ಮಹತ್ವ ತಿಳಿಸಿದರು. ವಿದ್ಯಾರ್ಥಿನಿ ಪ್ರಣಮ್ಯ ಒಗಟುಗಳನ್ನು ಕೇಳಿದರು.

ವಿದ್ಯಾರ್ಥಿಗಳಿಂದ ತುಳು ಪಾಡ್ದನ, ಹಾಡು, ನೃತ್ಯಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ಆಟಿಯ ವಿಶೇಷ ತಿಂಡಿ ತಿನಿಸುಗಳನ್ನು ತಂದು ಸಹಪಾಠಿಗಳಿಗೆ ಹಂಚಿದರು. ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

ನಿರೀಕ್ಷಾ ಸ್ವಾಗತಿಸಿ, ನಿಹಾಲ್ ವಂದಿಸಿದರು. ಪಲ್ಲವಿ ಅತಿಥಿ ಪರಿಚಯ ನೀಡಿದರು. ದಿಶಾನ್ ಮತ್ತು ಜ್ಞಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!