26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

ಉಜಿರೆ: ಆಚರಣೆಗಳ ವೈಜ್ಞಾನಿಕ ಕಾರಣ ತಿಳಿದುಕೊಂಡು ಸಂಸ್ಕೃತಿ ಉಳಿಸಬೇಕಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ರಂಗ ನಿರ್ದೇಶಕ ಯಶವಂತ್ ಹೇಳಿದರು.
ಉಜಿರೆಯ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತುಳು ಸಂಸ್ಕೃತಿ ಕುರಿತ ‘ಆಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕೃಷಿ ಅವಲಂಬಿತ ತುಳುನಾಡಿನ ಎಲ್ಲಾ ಹಬ್ಬಗಳಿಗೂ ಕೃಷಿಯು ಮೂಲವಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಹಲವಾರು ಆಚರಣೆಗಳು ಬೆಳೆದು ಬಂದಿವೆ. ಆಟಿ ತಿಂಗಳಿನಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಯದೇ ಪ್ರಕೃತಿಯನ್ನು ಆರಾಧಿಸುವ ವಿಶಿಷ್ಟ ಪದ್ಧತಿ ಇದೆ. ಎಲ್ಲ ಆಚರಣೆಗಳ ಹಿಂದೆ ವೈಜ್ಞಾನಿಕ ಕಾರಣಗಳಿವೆ ಎಂದರು.

ಮುಖ್ಯ ಶಿಕ್ಷಕಿ ವಿದ್ಯಾಲಕ್ಷ್ಮೀ ಅವರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ವರ್ಧನ್ ಜೈನ್ ತುಳು ಗಾದೆಗಳ ವಾಚನ ಮಾಡಿದರು ಹಾಗೂ ವಿವಿಧ ತರಗತಿ ವಿದ್ಯಾರ್ಥಿಗಳು ತುಳುಗಾದೆಗಳು ಹಾಗೂ ಅರ್ಥಗಳನ್ನು ವಾಚಿಸಿದರು.

ವಿದ್ಯಾರ್ಥಿನಿ ತಸ್ಮಯಿ ಅವರು ಆಟಿ ತಿಂಗಳ ಆಚರಣೆಗಳ ಮಹತ್ವ ತಿಳಿಸಿದರು. ವಿದ್ಯಾರ್ಥಿನಿ ಪ್ರಣಮ್ಯ ಒಗಟುಗಳನ್ನು ಕೇಳಿದರು.

ವಿದ್ಯಾರ್ಥಿಗಳಿಂದ ತುಳು ಪಾಡ್ದನ, ಹಾಡು, ನೃತ್ಯಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ಆಟಿಯ ವಿಶೇಷ ತಿಂಡಿ ತಿನಿಸುಗಳನ್ನು ತಂದು ಸಹಪಾಠಿಗಳಿಗೆ ಹಂಚಿದರು. ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

ನಿರೀಕ್ಷಾ ಸ್ವಾಗತಿಸಿ, ನಿಹಾಲ್ ವಂದಿಸಿದರು. ಪಲ್ಲವಿ ಅತಿಥಿ ಪರಿಚಯ ನೀಡಿದರು. ದಿಶಾನ್ ಮತ್ತು ಜ್ಞಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya
error: Content is protected !!