37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

ಗೇರುಕಟ್ಟೆ: ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿದರು.

ಕೇಂದ್ರ ಸರ್ಕಾರದ NSQF ಯೋಜನೆಯಡಿಯಲ್ಲಿ ಆಟೋಮೊಬೈಲ್ ತರಗತಿ ಅನುಷ್ಠಾನಗೊಳಿಸಲು ಬಿಡುಗಡೆಯಾದ ರೂ.2,50,000.00 ಅನುದಾನದಲ್ಲಿ ಸಿದ್ಧಗೊಳಿಸಿದ ಪ್ರಯೋಗಾಲಯವನ್ನು ಉದ್ಘಾಟಿಸಿ, ಶಾಸಕರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಗೇರುಕಟ್ಟೆ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮುಂದುವರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್, ಸಂಘ-ಸಂಸ್ಥೆಗಳು ಹಾಗೂ ಊರಿನವರು ಪಕ್ಷಭೇದ ಮರೆತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿ ಪೋಷಕರು, ಪತ್ರಿಕಾ ಮಿತ್ರರು, ಊರಿನ ಪ್ರಮುಖರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಹಾಗೂ ಪ್ರೌಢಶಾಲಾ ಬೋಧಕ, ಬೋಧಕೇತರ ವೃಂದದವರು ಭಾಗವಹಿಸಿದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya
error: Content is protected !!