22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

ಗೇರುಕಟ್ಟೆ: ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿದರು.

ಕೇಂದ್ರ ಸರ್ಕಾರದ NSQF ಯೋಜನೆಯಡಿಯಲ್ಲಿ ಆಟೋಮೊಬೈಲ್ ತರಗತಿ ಅನುಷ್ಠಾನಗೊಳಿಸಲು ಬಿಡುಗಡೆಯಾದ ರೂ.2,50,000.00 ಅನುದಾನದಲ್ಲಿ ಸಿದ್ಧಗೊಳಿಸಿದ ಪ್ರಯೋಗಾಲಯವನ್ನು ಉದ್ಘಾಟಿಸಿ, ಶಾಸಕರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಗೇರುಕಟ್ಟೆ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮುಂದುವರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್, ಸಂಘ-ಸಂಸ್ಥೆಗಳು ಹಾಗೂ ಊರಿನವರು ಪಕ್ಷಭೇದ ಮರೆತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿ ಪೋಷಕರು, ಪತ್ರಿಕಾ ಮಿತ್ರರು, ಊರಿನ ಪ್ರಮುಖರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಹಾಗೂ ಪ್ರೌಢಶಾಲಾ ಬೋಧಕ, ಬೋಧಕೇತರ ವೃಂದದವರು ಭಾಗವಹಿಸಿದರು.

Related posts

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!