September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

ಗೇರುಕಟ್ಟೆ: ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿದರು.

ಕೇಂದ್ರ ಸರ್ಕಾರದ NSQF ಯೋಜನೆಯಡಿಯಲ್ಲಿ ಆಟೋಮೊಬೈಲ್ ತರಗತಿ ಅನುಷ್ಠಾನಗೊಳಿಸಲು ಬಿಡುಗಡೆಯಾದ ರೂ.2,50,000.00 ಅನುದಾನದಲ್ಲಿ ಸಿದ್ಧಗೊಳಿಸಿದ ಪ್ರಯೋಗಾಲಯವನ್ನು ಉದ್ಘಾಟಿಸಿ, ಶಾಸಕರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಗೇರುಕಟ್ಟೆ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮುಂದುವರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್, ಸಂಘ-ಸಂಸ್ಥೆಗಳು ಹಾಗೂ ಊರಿನವರು ಪಕ್ಷಭೇದ ಮರೆತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿ ಪೋಷಕರು, ಪತ್ರಿಕಾ ಮಿತ್ರರು, ಊರಿನ ಪ್ರಮುಖರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಹಾಗೂ ಪ್ರೌಢಶಾಲಾ ಬೋಧಕ, ಬೋಧಕೇತರ ವೃಂದದವರು ಭಾಗವಹಿಸಿದರು.

Related posts

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಪಡಂಗಡಿ ಓಡೀಲು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya
error: Content is protected !!