22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಿನಾಂಕ 1.08.2025 ರಂದು ವರದಿಯಾಗಿದ್ದ ಯು.ಡಿ.ಆರ್ ಸಂಖ್ಯೆ: 35/2025, ಕಲಂ: 174 (3) & (VI) ಸಿ.ಆರ್.ಪಿ.ಸಿ ಪ್ರಕರಣ ಹಾಗೂ ದಿನಾಂಕ:04.08.2025 ರಂದು ವರದಿಯಾಗಿದ್ದ 200/DPS/2025 ದೂರರ್ಜಿಯನ್ನು, , ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸುವಂತೆ ಕರ್ನಾಟಕ ರಾಜ್ಯದ ಮಾನ್ಯ ಡಿ.ಜಿ.ಪಿ & ಐ.ಜಿ.ಪಿ ರವರು ಅದೇಶಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಆ.4ರಂದು ಧರ್ಮಸ್ಥಳ ಠಾಣೆಯಲ್ಲಿ ಇಚಿಲಂಪಾಡಿ ನಿವಾಸಿ ಜಯಂತ್ ಅವರು ನೀಡಿದ ದೂರು ಪ್ರಕರಣ ಹಾಗೂ ಅನಾಮಿಕ ದೂರುದಾರ ಗುರುತಿಸಿದ 6ನೇ ಸ್ಥಳದಲ್ಲಿ ದೊರೆತ ಶವದ ಅವಶೇಷಗಳ ಬಗ್ಗೆ ಆ.1 ರಂದು ಧಮ೯ಸ್ಥಳ ಠಾಣೆಯಲ್ಲಿ ದಾಖಲಾದ ಯು.ಡಿ.ಆರ್ ಪ್ರಕರಣವನ್ನು ಮುಂದಿನ ವಿಚಾರಣೆಗಾಗಿ ಕರ್ನಾಟಕ ರಾಜ್ಯದ ಡಿ.ಜಿ.ಪಿ ಮತ್ತು ಐ.ಜಿ.ಪಿಯವರು ಆದೇಶದಂತೆ ಎಸ್ ಐಟಿ ತನಿಖೆಗೆ ಹಸ್ತಾಂತರಿಸಬೇಕಾಗಿದೆ.

ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ಧರ್ಮಸ್ಥಳ ಗ್ರಾಮದಲ್ಲಿ 15 ವರ್ಷದ ಬಾಲಕಿಯ ಶವವನ್ನು ಯಾವುದೇ ಕಾನೂನು ಪ್ರಕ್ರಿಯೆ ನಡೆಸದೆ ಹೂತು ಹಾಕಲಾಗಿದೆ ಎಂದು ಆರೋಪಿಸಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 200/DPS/2025 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

Related posts

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

Suddi Udaya
error: Content is protected !!