25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಿನಾಂಕ 1.08.2025 ರಂದು ವರದಿಯಾಗಿದ್ದ ಯು.ಡಿ.ಆರ್ ಸಂಖ್ಯೆ: 35/2025, ಕಲಂ: 174 (3) & (VI) ಸಿ.ಆರ್.ಪಿ.ಸಿ ಪ್ರಕರಣ ಹಾಗೂ ದಿನಾಂಕ:04.08.2025 ರಂದು ವರದಿಯಾಗಿದ್ದ 200/DPS/2025 ದೂರರ್ಜಿಯನ್ನು, , ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸುವಂತೆ ಕರ್ನಾಟಕ ರಾಜ್ಯದ ಮಾನ್ಯ ಡಿ.ಜಿ.ಪಿ & ಐ.ಜಿ.ಪಿ ರವರು ಅದೇಶಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಆ.4ರಂದು ಧರ್ಮಸ್ಥಳ ಠಾಣೆಯಲ್ಲಿ ಇಚಿಲಂಪಾಡಿ ನಿವಾಸಿ ಜಯಂತ್ ಅವರು ನೀಡಿದ ದೂರು ಪ್ರಕರಣ ಹಾಗೂ ಅನಾಮಿಕ ದೂರುದಾರ ಗುರುತಿಸಿದ 6ನೇ ಸ್ಥಳದಲ್ಲಿ ದೊರೆತ ಶವದ ಅವಶೇಷಗಳ ಬಗ್ಗೆ ಆ.1 ರಂದು ಧಮ೯ಸ್ಥಳ ಠಾಣೆಯಲ್ಲಿ ದಾಖಲಾದ ಯು.ಡಿ.ಆರ್ ಪ್ರಕರಣವನ್ನು ಮುಂದಿನ ವಿಚಾರಣೆಗಾಗಿ ಕರ್ನಾಟಕ ರಾಜ್ಯದ ಡಿ.ಜಿ.ಪಿ ಮತ್ತು ಐ.ಜಿ.ಪಿಯವರು ಆದೇಶದಂತೆ ಎಸ್ ಐಟಿ ತನಿಖೆಗೆ ಹಸ್ತಾಂತರಿಸಬೇಕಾಗಿದೆ.

ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ಧರ್ಮಸ್ಥಳ ಗ್ರಾಮದಲ್ಲಿ 15 ವರ್ಷದ ಬಾಲಕಿಯ ಶವವನ್ನು ಯಾವುದೇ ಕಾನೂನು ಪ್ರಕ್ರಿಯೆ ನಡೆಸದೆ ಹೂತು ಹಾಕಲಾಗಿದೆ ಎಂದು ಆರೋಪಿಸಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 200/DPS/2025 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

Related posts

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya
error: Content is protected !!