22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

ಮಲವಂತಿಗೆ ಗ್ರಾಮ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ವತಿಯಿಂದ ಕಿಲ್ಲೂರಿನ ಗುರುನಾರಾಯಣ ಸಭಾ ಭವನದಲ್ಲಿ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಕೆನರಾ ಬ್ಯಾಂಕಿನ ವೃತ್ತ ಕಚೇರಿಯ ಎ. ಜಿ. ಎಂ. ನರೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ದ. ಕ. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ ಮಾತನಾಡಿ, ಮಲವಂತಿಗೆ ಗ್ರಾಮದಲ್ಲಿ 100% ಸರ್ಕಾರದ ವಿಮೆ ನೋಂದಣಿ ಆಗಬೇಕಾದರೆ ಜನರ ಸಹಕಾರಬೇಕು ಎಂದು ಹೇಳಿದರು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ವಿ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ ಸುರಕ್ಷಾ ಭೀಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ , ಅಟಲ್ ಪಿಂಚಣಿ ಯೋಜನೆ ಕೆನರಾ ಏಂಜೆಲ್ ಖಾತೆ, ಪೇ ರೋಲ್ ಖಾತೆ, ಮುದ್ರಾ ಸಾಲ ಇ ಕೆ ವೈ ಸಿ ಇತ್ಯಾದಿ ಬಗ್ಗೆ ವಿವರಣೆ ನೀಡಿದರು.

ಪುತ್ತೂರು ಪ್ರಾದೇಶಿಕ ಕಚೇರಿಯ ಡಿ.ಎಂ. ಅಜಿತ್ ಕುಮಾರ್ ಅವರು ಶುಭ ಹಾರೈಸಿದರು. ಮಲವಂತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಮಹಮದ್ ಕಾಜೂರು ಬ್ಯಾಂಕ್ ಸಮಸ್ಯೆಗಳನ್ನು ತಿಳಿಸಿದರು. ಬ್ಯಾಂಕ್ ಅಧಿಕಾರಿಗಳು ಸಮಸ್ಯೆಗಳನ್ನು ಸರಿ ಮಾಡಿ ಕೊಡುತ್ತೇವೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಪಿ. ಡಿ. ಓ. ರಶ್ಮಿ ಅವರು ಸ್ವಾಗತ ಕೋರಿದರು. ನಂತರ ಸರ್ಕಾರದ ವಿಮೆ ನೋಂದಣಿ ಮಾಡಲಾಯಿತು

Related posts

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!