25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

ಮಲವಂತಿಗೆ ಗ್ರಾಮ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ವತಿಯಿಂದ ಕಿಲ್ಲೂರಿನ ಗುರುನಾರಾಯಣ ಸಭಾ ಭವನದಲ್ಲಿ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಕೆನರಾ ಬ್ಯಾಂಕಿನ ವೃತ್ತ ಕಚೇರಿಯ ಎ. ಜಿ. ಎಂ. ನರೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ದ. ಕ. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ ಮಾತನಾಡಿ, ಮಲವಂತಿಗೆ ಗ್ರಾಮದಲ್ಲಿ 100% ಸರ್ಕಾರದ ವಿಮೆ ನೋಂದಣಿ ಆಗಬೇಕಾದರೆ ಜನರ ಸಹಕಾರಬೇಕು ಎಂದು ಹೇಳಿದರು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ವಿ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ ಸುರಕ್ಷಾ ಭೀಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ , ಅಟಲ್ ಪಿಂಚಣಿ ಯೋಜನೆ ಕೆನರಾ ಏಂಜೆಲ್ ಖಾತೆ, ಪೇ ರೋಲ್ ಖಾತೆ, ಮುದ್ರಾ ಸಾಲ ಇ ಕೆ ವೈ ಸಿ ಇತ್ಯಾದಿ ಬಗ್ಗೆ ವಿವರಣೆ ನೀಡಿದರು.

ಪುತ್ತೂರು ಪ್ರಾದೇಶಿಕ ಕಚೇರಿಯ ಡಿ.ಎಂ. ಅಜಿತ್ ಕುಮಾರ್ ಅವರು ಶುಭ ಹಾರೈಸಿದರು. ಮಲವಂತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಮಹಮದ್ ಕಾಜೂರು ಬ್ಯಾಂಕ್ ಸಮಸ್ಯೆಗಳನ್ನು ತಿಳಿಸಿದರು. ಬ್ಯಾಂಕ್ ಅಧಿಕಾರಿಗಳು ಸಮಸ್ಯೆಗಳನ್ನು ಸರಿ ಮಾಡಿ ಕೊಡುತ್ತೇವೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಪಿ. ಡಿ. ಓ. ರಶ್ಮಿ ಅವರು ಸ್ವಾಗತ ಕೋರಿದರು. ನಂತರ ಸರ್ಕಾರದ ವಿಮೆ ನೋಂದಣಿ ಮಾಡಲಾಯಿತು

Related posts

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!