September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

ಮಲವಂತಿಗೆ ಗ್ರಾಮ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ವತಿಯಿಂದ ಕಿಲ್ಲೂರಿನ ಗುರುನಾರಾಯಣ ಸಭಾ ಭವನದಲ್ಲಿ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಕೆನರಾ ಬ್ಯಾಂಕಿನ ವೃತ್ತ ಕಚೇರಿಯ ಎ. ಜಿ. ಎಂ. ನರೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ದ. ಕ. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ ಮಾತನಾಡಿ, ಮಲವಂತಿಗೆ ಗ್ರಾಮದಲ್ಲಿ 100% ಸರ್ಕಾರದ ವಿಮೆ ನೋಂದಣಿ ಆಗಬೇಕಾದರೆ ಜನರ ಸಹಕಾರಬೇಕು ಎಂದು ಹೇಳಿದರು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ವಿ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ ಸುರಕ್ಷಾ ಭೀಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ , ಅಟಲ್ ಪಿಂಚಣಿ ಯೋಜನೆ ಕೆನರಾ ಏಂಜೆಲ್ ಖಾತೆ, ಪೇ ರೋಲ್ ಖಾತೆ, ಮುದ್ರಾ ಸಾಲ ಇ ಕೆ ವೈ ಸಿ ಇತ್ಯಾದಿ ಬಗ್ಗೆ ವಿವರಣೆ ನೀಡಿದರು.

ಪುತ್ತೂರು ಪ್ರಾದೇಶಿಕ ಕಚೇರಿಯ ಡಿ.ಎಂ. ಅಜಿತ್ ಕುಮಾರ್ ಅವರು ಶುಭ ಹಾರೈಸಿದರು. ಮಲವಂತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಮಹಮದ್ ಕಾಜೂರು ಬ್ಯಾಂಕ್ ಸಮಸ್ಯೆಗಳನ್ನು ತಿಳಿಸಿದರು. ಬ್ಯಾಂಕ್ ಅಧಿಕಾರಿಗಳು ಸಮಸ್ಯೆಗಳನ್ನು ಸರಿ ಮಾಡಿ ಕೊಡುತ್ತೇವೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಪಿ. ಡಿ. ಓ. ರಶ್ಮಿ ಅವರು ಸ್ವಾಗತ ಕೋರಿದರು. ನಂತರ ಸರ್ಕಾರದ ವಿಮೆ ನೋಂದಣಿ ಮಾಡಲಾಯಿತು

Related posts

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!