26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

ಮುಂಡೂರು : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ, ಅಕ್ಷಯ ಬಂಟರ ಗ್ರಾಮ ಸಮಿತಿ , ಮುಂಡೂರು ಇದರ ವತಿಯಿಂದ ಆಟಿದ ನೆನಪು ಕಾರ್ಯಕ್ರಮವು ಕಲ್ಲಂಡ ಶ್ರೀಮತಿ ಪುಷ್ಪ ವಸಂತ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ನಿರ್ದೇಶಕ ನಾರಾಯಣ ಶೆಟ್ಟಿ ಯವರು ದೀಪ ಬೆಳಗಿಸಿ, ಚೆನ್ನೆ ಮಣೆ ಆಡುವುದರೊಂದಿಗೆ ಉದ್ಘಾಟಿಸಿ, ಕಳೆದ 19 ವರ್ಷಗಳಿಂದ ಕೇವಲ 16 ಬಂಟ ಸಮುದಾಯ ಮನೆ ಹೊಂದಿರುವ ಈ ಕಾರ್ಯಕ್ರಮ ಮಾಡಿರುವುದು ಬಹಳ ವಿಶೇಷವಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಭೆಯ ಅಧ್ಯಕ್ಷತೆಯನ್ನು, ಅಕ್ಷಯ ಬಂಟರ ಸಂಘದ ಅಧ್ಯಕ್ಷ ಕೇಶವ ಶೆಟ್ಟಿ ವಹಿಸಿದ್ದರು. ಅಕ್ಷಯ ಬಂಟರ ಸಂಘದ ಮಾಜಿ ಅಧ್ಯಕ್ಷ ಸೀತರಾಮ ಶೆಟ್ಟಿ ಮಾತನಾಡುತ್ತ, ಹಿಂದಿನ ಕಾಲದಲ್ಲಿ, ಸೊಪ್ಪು , ತರಕಾರಿ, ಗೆಡ್ಡೆ ಗೆಣಸುಗಳನ್ನು ತಿಂದು ಬದುಕುತ್ತಿದ್ದೆವು, ಇಂದಿನ ಮಕ್ಕಳು ಇದನ್ನು ಸದ್ಭಳಕೆ ಮಾಡಿದಲ್ಲಿ, ಆರೋಗ್ಯಕರವಾದ ಜೀವನ ನಡೆಸಲು ಸಾಧ‍್ಯ ಎಂದರು,

ವೇದಿಕೆಯಲ್ಲಿ, ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಸದಸ್ಯರಾದ ಶ್ರೀಮತಿ ಪುಷ್ಪ ಶೆಟ್ಟಿ, ಕೋಶಾಧಿಕಾರಿ ಸುಧಾಮಣಿ ಉಪಸ್ಥಿತರಿದ್ದರು. ಸುಮಾರು 30 ವಿಧದ , ಎಲ್ಲಾ ಮನೆಗಳಿಂದ ತಂದ ಹಳೇಯ ಕಾಲದಲ್ಲಿ ಬಳಕೆ ಮಾಡುತ್ತಿದ್ದ, ಆಹಾರ ವಸ್ತುಗಳ ಪ್ರದರ್ಶಿಸಲಾಯಿತು. ಶ್ರೀಮತಿ ಸುಷ್ಮಾ, ಹಾಗೂ, ಶ್ರೀಮತಿ ದೀಪ್ತಿ ಪ್ರಾರ್ಥಿಸಿದರು., ಕು. ವೀಕ್ಷಾರವರು ಆಟಿಯ ಹಿನ್ನಲೆಯನ್ನು ತಿಳಿಸಿದರು. ಶ್ರೀಮತಿ ವಿದ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!