July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಬಳಂಜ : ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಿಂತನೆ ವೃದ್ಧಿಯೊಂದಿಗೆ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 4 ಮತ್ತು 5ನೇ ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರು ಮತ್ತು ಪ್ರೌಢಶಾಲಾ ವಿಭಾಗದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಧ್ಯಕ್ಷ ವಸಂತ ಸಾಲಿಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಯಲ್ಲಿ ಇಂತಹ ಕಾರ್ಯಗಾರವನ್ನು ಹಮ್ಮಿಕೊಂಡಿರುವ ಮೈಟ್ ಕಾಲೇಜಿನ ಮುಖ್ಯಸ್ಥರನ್ನು ಹಾಗೂ ವಿದ್ಯಾರ್ಥಿಗಳನ್ನು ಪ್ರಶಂಸಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.


ಕಾರ್ಯಕ್ರಮದಲ್ಲಿ ಶಿಕ್ಷಣ ಟ್ರಸ್ಟ್ (ರಿ) ಬಳಂಜ ಇದರ ನಿರ್ದೇಶಕ ಪ್ರಮೋದ್ ಕುಮಾರ್ ಜೈನ್ ಮಾತನಾಡಿ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಾಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಮೈಟ್ ಕಾಲೇಜಿನ ಆಡಳಿತ ಮಂಡಳಿಗೆ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ಮೈಟ್ ಕಾಲೇಜಿನ ಉಪನ್ಯಾಸಕ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಾಗಾರದ ಬಗ್ಗೆ ವಿವರಣೆಯನ್ನು ನೀಡಿದರು. ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿಯವರು ಉಪಸ್ಥಿತರಿದ್ದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಕೃತಿಕಾ, ಪ್ರಶಸ್ತ, ನಿಶಿಕಾ, ತೀರ್ಥಶ್ರೀ, ಶೀತಲ್ ರಶ್ಮಿ, ಸಹೀಮಾ, ಜೋಸ್ವಿನ್, ಸಂಕೇತ್ ,ಶ್ರೀರಾಮ್, ಸುಕ್ಷಿತ್, ಅಕ್ಷಯ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಆಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಕೆ ಸ್ವಾಗತಿಸಿದರು. ಅಧ್ಯಾಪಕಿ ಶ್ರೀಮತಿ ವೀಣಾ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು .

Related posts

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!