37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

ಬೆಳ್ತಂಗಡಿ; ದಿ ನಾರಾಯಣ ತಾಮನ್ಕರ್ ಮುಂಡಾಜೆಯವರ ಸ್ಮರಣಾರ್ಥವಾಗಿ ಅವರ ಮಗ ವಿಶ್ರಾಂತ ಅಧ್ಯಾಪಕ ಹಾಗೂ ಕವಿ ಶಂಕರ್ ಎನ್. ತಾಮನ್ಕರ್ ರವರು ಮತ್ತು ಸ್ವಾತಿ ತಾಮನ್ಕರ್ ಅವರು ತಮ್ಮ “ಪರಂಪರಾ” ಮನೆಯಲ್ಲಿ ಅರ್ಹ ಕುಟುಂಬಗಳಿಗೆ ಆಹಾರದ ಕಿಟ್ ಹಾಗೂ ಪ್ರತಿಭಾ ಸಂಪನ್ನ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾ ನಿಧಿ ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಮುಂಡಾಜೆ ಪರಿಸರದ ನಾಲ್ಕು ವಿದ್ಯಾರ್ಥಿಗಳಿಗೆ ತಲಾ ರೂ. 5000 ದಂತೆ ವಿದ್ಯಾರ್ಥಿ ಸಹಾಯ ಹಸ್ತ, ಮೂರು ಮಂದಿ ಅರ್ಹ ನಾಗರಿಕರಿಗೆ ಆಹಾರ ಕಿಟ್ಟ್ ಹಾಗೂ ಒಬ್ಬ ನಾಗರಿಕರಿಗೆ ರೂ.5000 ಆರೋಗ್ಯ ಸಹಾಯ ಹಸ್ತವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗಣೇಶ್ ಬಂಗೇರ ಅಧ್ಯಕ್ಷರು ಗ್ರಾಮ ಪಂಚಾಯತ್ ಮುಂಡಾಜೆ, ನಾಮದೇವ ರಾವ್ ಸಂಚಾಲಕರು ಯಂಗ್ ಚಾಲೆಂಜರ್ಸ್ ಮುಂಡಾಜೆ, ಉದ್ಯಮಿ ಅರೆಕ್ಕಲ್ ರಾಮಚಂದ್ರ ಭಟ್, ದಿಶಾ ಪಟವರ್ಧನ್ ಗ್ರಾಮ ಪಂಚಾಯತ್ ಸದಸ್ಯರು ಮುಂಡಾಜೆ ಯವರು ಭಾಗವಹಿಸಿ ಶುಭ ಕೋರಿದರು.ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು. ಶಂಕರ್ ತಾಮನ್ಕರರವರು ಸ್ವಾಗತ ಮತ್ತು ವಂದನಾರ್ಪಣೆಯನ್ನು ಮಾಡಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!