22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

ಬೆಳ್ತಂಗಡಿ; ದಿ ನಾರಾಯಣ ತಾಮನ್ಕರ್ ಮುಂಡಾಜೆಯವರ ಸ್ಮರಣಾರ್ಥವಾಗಿ ಅವರ ಮಗ ವಿಶ್ರಾಂತ ಅಧ್ಯಾಪಕ ಹಾಗೂ ಕವಿ ಶಂಕರ್ ಎನ್. ತಾಮನ್ಕರ್ ರವರು ಮತ್ತು ಸ್ವಾತಿ ತಾಮನ್ಕರ್ ಅವರು ತಮ್ಮ “ಪರಂಪರಾ” ಮನೆಯಲ್ಲಿ ಅರ್ಹ ಕುಟುಂಬಗಳಿಗೆ ಆಹಾರದ ಕಿಟ್ ಹಾಗೂ ಪ್ರತಿಭಾ ಸಂಪನ್ನ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾ ನಿಧಿ ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಮುಂಡಾಜೆ ಪರಿಸರದ ನಾಲ್ಕು ವಿದ್ಯಾರ್ಥಿಗಳಿಗೆ ತಲಾ ರೂ. 5000 ದಂತೆ ವಿದ್ಯಾರ್ಥಿ ಸಹಾಯ ಹಸ್ತ, ಮೂರು ಮಂದಿ ಅರ್ಹ ನಾಗರಿಕರಿಗೆ ಆಹಾರ ಕಿಟ್ಟ್ ಹಾಗೂ ಒಬ್ಬ ನಾಗರಿಕರಿಗೆ ರೂ.5000 ಆರೋಗ್ಯ ಸಹಾಯ ಹಸ್ತವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗಣೇಶ್ ಬಂಗೇರ ಅಧ್ಯಕ್ಷರು ಗ್ರಾಮ ಪಂಚಾಯತ್ ಮುಂಡಾಜೆ, ನಾಮದೇವ ರಾವ್ ಸಂಚಾಲಕರು ಯಂಗ್ ಚಾಲೆಂಜರ್ಸ್ ಮುಂಡಾಜೆ, ಉದ್ಯಮಿ ಅರೆಕ್ಕಲ್ ರಾಮಚಂದ್ರ ಭಟ್, ದಿಶಾ ಪಟವರ್ಧನ್ ಗ್ರಾಮ ಪಂಚಾಯತ್ ಸದಸ್ಯರು ಮುಂಡಾಜೆ ಯವರು ಭಾಗವಹಿಸಿ ಶುಭ ಕೋರಿದರು.ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು. ಶಂಕರ್ ತಾಮನ್ಕರರವರು ಸ್ವಾಗತ ಮತ್ತು ವಂದನಾರ್ಪಣೆಯನ್ನು ಮಾಡಿದರು.

Related posts

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!