September 6, 2026
ಆರೋಗ್ಯ

ವೇಣೂರು :ಬ್ರಹತ್ ಉಚಿತ ವೈದ್ಯಕೀಯ ಹೃದಯ ರೋಗ ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ

ವೇಣೂರು :ಬ್ರಹತ್ ಉಚಿತ ವೈದ್ಯಕೀಯ ಹೃದಯ ರೋಗ ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಶಾಸಕರಾದ ಹರೀಶ್ ಪೂಂಜಾ ರವರು ಕಾರ್ಯಕ್ರಮ ವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿ ಇಂದಿನ ಅನಾರೋಗ್ಯಕ್ಕೆ ಆಧುನಿಕ ಜೀವನಶೈಲಿಯ ಪ್ರಮುಖ ಕಾರಣವಾಗಿದೆ ಬದಲಾದ ಜೀವನ ಶೈಲಿ ಆಹಾರದ ಪದ್ಧತಿ ಯಿಂದಾಗಿ ದಿನಕ್ಕೊಂದರಂತೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿದೆ ಇಂದಿನ ದಾವಂತದ ಒತ್ತಡದ ಜೀವನ ಕ್ರಮದಿಂದಾಗಿ ಯಾರಿಗೂ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಲು ಸಮಯವಿಲ್ಲದಂತಾಗಿದೆ ನಾವು ಮಕ್ಕಳಿಗೆ ಶಿಕ್ಷಣ ನೀಡುವಾಗ ಬಹಳ ಯೋಚನೆ ಮಾಡುತ್ತೆವೆ ನಮ್ಮ ಅರೋಗ್ಯ ಕಡೆ ನಾವು ಯೋಚನೆ ಮಾಡುವುದ್ದಿಲ್ಲ ನಾವು ಪ್ರತಿ ನಿತ್ಯ ಸೇವಿಸುವ ಆಹಾರ ಬಗ್ಗೆ ನಮಗೆ ಸ್ವಲ್ಪವು ಕಾಳಜಿ ಇಲ್ಲ ನಮ್ಮ ಮನೆಗೆ ಬೇಕಾಗುವ ತರಕಾರಿಯನ್ನು ನಾವೇ ಬೆಳೆದು ಸೇವಿಸಿ ನಮ್ಮ ಅರೋಗ್ಯ ನಾವೇ ಕಾಪಾಡಿಕೊಳಬೇಕೆಂದು ಮಾಹಿತಿ ನೀಡಿದರು

ಕೆ. ಎಂ. ಸಿ ಆಸ್ಪತ್ರೆ ಆತಾವರ ಮಂಗಳೂರನ ನುರಿತ ವೈದ್ಯರ ಮಾರ್ಗದರ್ಶನ ದಲ್ಲಿ ಕ್ಯಾನ್ಸರ್ ತಪಾಸಣೆ ಯನ್ನು ಪುರುಷ ರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಾಗಿ ತಪಾಸಣೆ ನಡೆಸಲಾಯಿತು ರಕ್ತದಾನ ಶಿಬಿರ ಆಯೋಜನೆ ಮಾಡಲಾಯಿತು ಬಹಳ ಜನರು ರಕ್ತ ದಾನ ಭಾಗವಹಿಸಿದರು, ಸಾಮಾನ್ಯ ರೋಗ ವಿಭಾಗ ಎಲಬು ಮತ್ತು ಕಿಲುರೋಗ ವಿಭಾಗ ಕಿವಿ ಮೂಗು ಮತ್ತು ಗಂಟಲು ವಿಭಾಗ ಕ್ಯಾನ್ಸರ್ ವಿಭಾಗ, ಕಣ್ಣಿನ ವಿಭಾಗ ಹೃದಯ ವಿಭಾಗ ವಾಗಿ ವಿಂಗಡಣೆ ಮಾಡಿ ಎಲ್ಲಾ ಜನರಿಗೆ ತಪಾಸಣೆ ಮಾಡಲಾಯಿತು

ಕಾರ್ಯಕ್ರಮ ದಲ್ಲಿ :ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಜಗದೀಶ್ ನಾಯಕ್ ಸಿಎ ಬ್ಯಾಂಕಿನ ಅಧ್ಯಕ್ಷರು ಸುಂದರ ಹೆಗ್ಡೆ skdrdp ಬಿ. ಸಿ ಟ್ರಸ್ಟ್ ಯೋಜನಾಧಿಕಾರಿಗಳು ಅಶೋಕ್, ಹಾಲು ಉತ್ಪಾದಕರ ಸಹಕರಿ ಸಂಘದ ಅಧ್ಯಕ್ಷರು ಸೀತಾರಾಮ್ ರೈ ಮತ್ತು ಜಗದೀಶ್ ನಾಯಕ್ ಪೂರ್ಣಚಂದ್ರ ಸೇವಾ ಪ್ರತಿಷ್ಠಾಪನ ಅಧ್ಯಕ್ಷರು ಮರಳಿದರ್ ಪ್ರಭು ಬಂಟರ, ಗ್ರಾಮ ಸಮಿತಿ ಅಧ್ಯಕ್ಷರು ರವಿಚಂದ್ರ ಶೆಟ್ಟಿ ಮತ್ತು ಮಂಜುನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷರು ದಿನೇಶ್ ಶೆಟ್ಟಿ ಕ್ರಿಸ್ತ ದೇವಾಲಯ ಭಾರತೀಯ ಕ್ಯಾಥೋಲಿಕ್ ಯುವಕ ಸಂಚಾಲನ ವೇನೂರು ಘಟಕದ ಅಧ್ಯಕ್ಷರು ಅರುಣ ಮತ್ತು ಜಸ್ವಿನ್ ಲೋಬೊ ವಲಯದ ಮೇಲ್ವಿಚಾರಕರು ಶ್ರೀ ಮತಿ ಶಾಲಿನಿ ಒಕ್ಕೂಟದ ಅಧ್ಯಕ್ಷರುಗಳಾದ ವಿನ್ಸೆಂಟ್ ವಿಲಿಯಂ ರೇಗು ಮತ್ತು ಪ್ರವೀಣ್ ನಾಯಕ್ ರಮೇಶ್ ನಾಯಕ್ ಸ್ವಾಗತಿ ಸಿದರು ಸೇವಾ ಪ್ರತಿನಿಧಿಯಾದ ಶೋಭಾ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು

Related posts

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!