23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಮತ್ತು ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು “ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ಮತ್ತು ವೈಜ್ಞಾನಿಕ ಆವಿಷ್ಕಾರಗಳು (Scientific Innovations) ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತೃತೀಯ ಬಿಸಿಎ,ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗಾಗಿ ಆ.4 ರಂದು ಆಯೋಜಿಸಿತು.

ಬೆಂಗಳೂರಿನ ಅಲ್ಲೈನ್ಸ್ ವಿಶ್ವವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಪ್ರಾದ್ಯಾಪಕ ಡಾ ನಾಗರಾಜ ಎಸ್ ರವರು ಸಂಪನ್ಯೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು ಮತ್ತು ಅವರು ಕೃತಕ ಬುದ್ಧಿಮತ್ತೆ (Artificial Intelligence) ಮತ್ತು ವೈಜ್ಞಾನಿಕ ಆವಿಷ್ಕಾರಗಳು (Scientific Innovations) ತಾಂತ್ರಿಕ ಪ್ರಗತಿಯ ಹೊಸ ಯುಗವನ್ನು ನಿರೂಪಿಸುತ್ತಿದ್ದು, ಇವುಗಳನ್ನು ಆಧರಿಸಿದ ಭವಿಷ್ಯದ ಅವಕಾಶಗಳು ಉದ್ಯೋಗ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಹಾಗೂ ಪರಿಸರದ ಕ್ಷೇತ್ರಗಳಲ್ಲಿ ಅಪಾರವಾಗಿವೆ. ಹೊಸತನ, ಸಂಶೋಧನೆ ಮತ್ತು ಡಿಜಿಟಲ್ ರೂಪಾಂತರಗಳ ಮೂಲಕ ಇವು ಮಾನವ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ ವಿಶ್ವನಾಥ ಪಿ ರವರು ವಹಿಸಿದ್ದರು. ಕೃತಕ ಬುದ್ಧಿಮತ್ತೆ ಹಾಗೂ ವೈಜ್ಞಾನಿಕ ಆವಿಷ್ಕಾರಗಳು ಕೌಶಲ್ಯ ಪರಿವರ್ತನೆಗೆ ಕಾರಣವಾಗುತ್ತವೆ ಎಂಬ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಶೈಲೇಶ್ ಕುಮಾರ ರವರು ಉಪಸ್ಥಿತರಿದ್ದರು. ಎಸ್.ಡಿ,ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು ನಿರ್ದೇಶಕರಾದ ಡಾ.. ನಾಗರಾಜ ಪೂಜಾರಿ ಕಾರ್ಯಕ್ರಮವನ್ನು ಸಂಘಟಿಸಿದ್ದರು ಮತ್ತು ವೃತ್ತಿ ಮಾರ್ಗದರ್ಶನ ಕೇಂದ್ರದ ಸದಸ್ಯರು ಮತ್ತು ಜೈವಿಕ ತಂತ್ರಜ್ಞಾನ ವಿಭಾಗದ ಉಪನ್ಯಾಸಕ ದೀಕ್ಷಿತ್ ರೈ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya
error: Content is protected !!