23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

ವಿದ್ಯಾರ್ಥಿಗಳು ವಿದ್ಯೆ, ಉದ್ಯೋಗ ನೀಡಿದ ಶಿಕ್ಷಣ ಸಂಸ್ಥೆಗೆ, ಹೆತ್ತವರಿಗೆ ಸದಾ ವಿಧೇಯರಾಗಿರಬೇಕು, ವಿದ್ಯಾವಂತರೆಂಬ ಅಹಂಕಾರ ಸಲ್ಲದು ಎಂದು ಕಿಲ್ಲೂರಿನ ಹಿರಿಯ ವೈದ್ಯೆ ಡಾ. ವಾಣಿ ಸುಗುಣ ಕುಮಾರ್ ಹೇಳಿದರು.

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಆ.4ರಂದು ಅವರು ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ವಿದ್ಯೆ ಇಲ್ಲ ಎಂಬ ಹಿಂಜರಿಕೆ ಇರಬಾರದು. ಕಲಿಕೆಗೆ ಬೇಕಾದ ವ್ಯವಸ್ಥೆಯನ್ನು ಹೆತ್ತವರು ಮಾಡಬೇಕು. ಹಾಗೆಂದು ವಿದ್ಯೆ ಕಲಿತ ಕೂಡಲೇ ಜೀವನದ ಅನುಭವ ಬರುವುದಿಲ್ಲ. ಜೀವನಾನುಭವ ಬರಬೇಕಾದರೆ ಉದ್ಯೋಗಕ್ಕೆ ಸೇರಬೇಕು. ಅಹಂಕಾರ ಬಿಟ್ಟು ಜೀವನಾನುಭವ ಗಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಅವರು ತಿಳಿಸಿದರು.

“ಉದ್ಯೋಗ ಕಲ್ಪಿಸುವ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಮಹತ್ವ, ಬೇಡಿಕೆಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಈ ಕಾಲೇಜು ವಿದ್ಯಾರ್ಥಿಗಳಿಗೆ ಆಶಾದಾಯಕವಾಗಿದೆ” ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. “ಸ್ವಂತ ಸಂಪಾದನೆಯ ಮೇಲೆ ಬನ್ನಿ, ತಂದೆ ತಾಯಿಗೆ ಹೊರೆಯಾಗಬೇಡಿ. ಛಲದಿಂದ ಓದಿ. ಸಾಧನೆಗೆ ವಯಸ್ಸು ಮುಖ್ಯವಲ್ಲ” ಎಂದು ಕಿವಿಮಾತು ಹೇಳಿದರು.

ಸಂಪನ್ಮೂಲ ವ್ಯಕ್ತಿ, ಮಾಲಾಡಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ರಮೇಶ್ ನಾಯ್ಕ ಅವರು ಮಾತನಾಡಿ, ಐ.ಟಿ.ಐ. ಶಿಕ್ಷಣ ಕುರಿತು, ವಿವಿಧ ಉದ್ಯೋಗ ಅವಕಾಶಗಳು, ಅಪ್ರಂಟಿಶಿಪ್ ಹಾಗೂ ಉನ್ನತ ಶಿಕ್ಷಣ ಮಾಡಲು ಇರುವ ಅವಕಾಶ ಕುರಿತು ತಿಳಿಸಿದರು. ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನಿಂದ ಐ.ಟಿ.ಐ.ಗೆ ಇರುವ ಮಾನ್ಯತೆ ಕುರಿತು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಎಸ್.ಎನ್. ಕಾಕತ್ಕರ್ ಅವರು, ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಕರ್ಯ ಒದಗಿಸುತ್ತಿರುವುದರಿಂದ ಎಲ್ಲಾ ಸೀಟುಗಳು ಭರ್ತಿಯಾಗುತ್ತಿವೆ. ಪ್ರಾಧ್ಯಾಪಕರ ಶ್ರಮ ಮತ್ತು ಉತ್ತಮ ಬೋಧನೆಯಿಂದ ಕಾಲೇಜಿಗೆ ಹೆಸರು ಬರುತ್ತಿದೆ. ಆದಷ್ಟು ಶಿಸ್ತುಬದ್ಧ ಜೀವನ, ಸಮಯಪಾಲನೆ ಹೊಂದಿದಾಗ ನಿರ್ದಿಷ್ಟ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.


ಎಲ್ಲಾ ವಿದ್ಯಾರ್ಥಿನಿಯರು ಭಾರತಮಾತೆಗೆ ದೀಪ ಬೆಳಗಿಸುವ ಮೂಲಕ ಗೌರವ ಸಮರ್ಪಿಸಿದರು. ಸಂಸ್ಥೆಯ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಪ್ರಸ್ತಾವಿಸಿ, ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿ ಕ್ಷಮಾ ಕುಲಾಲ್ ವಂದಿಸಿದರು. ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!