July 23, 2026
ಆಯ್ಕೆ

ಕಾಶಿಪಟ್ಣ ದಾರುನ್ನೂರ್ ಸಂಸ್ಥೆಯಲ್ಲಿ ಪ್ರಾಥಮಿಕ ಶಾಲಾ ವಲಯ ಮಟ್ಟದ ಶೆಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ದಾರುನ್ನೂರು ಎಜುಕೇಶನ್ ಸೆಂಟರ್ ಕಾಶಿಪಟ್ಣದಲ್ಲಿ ಆಯೋಜಿಸಿದ್ದ ಬಜಿರೆ, ನಿಟ್ಟಡೆ ಮತ್ತು ಪಡ್ಡಂದಡ್ಕ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ದಾರುನ್ನೂರು ಕಾಶಿಪಟ್ಣ ಸಂಸ್ಥೆಯ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಕೋಶಾಧಿಕಾರಿ ಉಸ್ಮಾನ್ ಹಾಜಿ ಏರ್ ಇಂಡಿಯಾ ನಿರ್ವಹಿಸಿದರು. ಸಂಸ್ಥೆಯ ಸದರ್ ಮುದರ್ರಿಸ್ ಹುಸೇನ್ ರಹ್ಮಾನಿ ಅಧ್ಯಕ್ಷತೆ ವಹಿಸಿದ್ದರು. ನಿಟ್ಟಡೆ ಮತ್ತು ಪಡ್ಡಂದಡ್ಕ ಸಮೂಹ ಸಂಪನ್ಮೂಲ ವ್ಯಕ್ತಿ ಆರತಿ,ವಲಯ ನೋಡಲ್ ಅಧಿಕಾರಿ ಪುಷ್ಪಾ , ಸಂಸ್ಥೆಯ ಪ್ರಾಂಶುಪಾಲ ರಶೀದ್ ಹುದವಿ ಮೂಡಿಗೆರೆ, ದ.ಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೋಶಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಮುಹಮ್ಮದ್ ಅನ್ವರ್ ಸ್ವಾಗತಿಸಿ ಸಹಶಿಕ್ಷಕ ಮುಹಮ್ಮದ್ ಅಕ್ರಂ ವಂದಿಸಿದರು.
ಸಮಾರೋಪ ಸಮಾರಂಭ;
ಸಂಸ್ಥೆಯಲ್ಲಿ ನಡೆದ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ದಾರುನ್ನೂರು ಕಾಶಿಪಟ್ಣ ಬಾಲಕಿಯರ ವಿಭಾಗದಲ್ಲಿ ನವಚೇತನಾ ವೇಣೂರು ಚಾಂಪಿಯನ್ ಮತ್ತು ರನ್ನರ್ ಅಪ್ ಗಳಾಗಿ, ಕ್ರಮವಾಗಿ ವಿದ್ಯೋದಯ ವೇಣೂರು ಮತ್ತು ಸ.ಉ.ಪ್ರಾ ಶಾಲೆ ಹೊಕ್ಕಾಡಿಗೋಳಿ ಸ್ಥಾನಗಳನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಕಾಶಿಪಟ್ಣ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಲತಾ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಫಕೀರಬ್ಬ ಮಾಸ್ಟರ್‌ ಮರೋಡಿ, ಸಮೂಹ ಸಂಪನ್ಮೂಲ ವ್ಯಕ್ತಿ ಆರತಿ, ಸಂಸ್ಥೆಯ ಉಪ ಪ್ರಾಂಶುಪಾಲ ಶಮೀಮ್ ಹುದವಿ ತುಂಬೆ, ಮುಖ್ಯೋಪಾಧ್ಯಾಯ ಮುಹಮ್ಮದ್ ಅನ್ವರ್ ಉಪಸ್ಥಿತರಿದ್ದರು. ಸಂಸ್ಥೆಯ ವ್ಯವಸ್ಥಾಪಕ ಅಬ್ದುಲ್ ಹಕೀಂ ಸ್ವಾಗತಿಸಿ ಸಹ ಶಿಕ್ಷಕ ಮುಹಮ್ಮದ್ ನೌಶಾದ್ ಕಾರ್ಯಕ್ರಮ ನಿರ್ವಹಿಸಿದರು.
ವಿಜೇತರಿಗೆ ಪ್ರಶಸ್ತಿ ಫಲಕ ,ಪ್ರಶಸ್ತಿ ಪತ್ರ ಮತ್ತು ಟ್ರೋಫಿಯನ್ನು ವಿತರಿಸಿ ಗೌರವಿಸಲಾಯಿತು.

Related posts

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಜೊತೆಗೆ ಹಿರಿಯ ವಿಭಾಗದಲ್ಲಿ ರನ್ನರ್ ಆಪ್ ಚಾಂಪಿಯನ್

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya
error: Content is protected !!