September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

ಗೇರುಕಟ್ಟೆ: ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿದರು.

ಕೇಂದ್ರ ಸರ್ಕಾರದ NSQF ಯೋಜನೆಯಡಿಯಲ್ಲಿ ಆಟೋಮೊಬೈಲ್ ತರಗತಿ ಅನುಷ್ಠಾನಗೊಳಿಸಲು ಬಿಡುಗಡೆಯಾದ ರೂ.2,50,000.00 ಅನುದಾನದಲ್ಲಿ ಸಿದ್ಧಗೊಳಿಸಿದ ಪ್ರಯೋಗಾಲಯವನ್ನು ಉದ್ಘಾಟಿಸಿ, ಶಾಸಕರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಗೇರುಕಟ್ಟೆ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮುಂದುವರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್, ಸಂಘ-ಸಂಸ್ಥೆಗಳು ಹಾಗೂ ಊರಿನವರು ಪಕ್ಷಭೇದ ಮರೆತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿ ಪೋಷಕರು, ಪತ್ರಿಕಾ ಮಿತ್ರರು, ಊರಿನ ಪ್ರಮುಖರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಹಾಗೂ ಪ್ರೌಢಶಾಲಾ ಬೋಧಕ, ಬೋಧಕೇತರ ವೃಂದದವರು ಭಾಗವಹಿಸಿದರು.

Related posts

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya
error: Content is protected !!