22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಿನಾಂಕ 1.08.2025 ರಂದು ವರದಿಯಾಗಿದ್ದ ಯು.ಡಿ.ಆರ್ ಸಂಖ್ಯೆ: 35/2025, ಕಲಂ: 174 (3) & (VI) ಸಿ.ಆರ್.ಪಿ.ಸಿ ಪ್ರಕರಣ ಹಾಗೂ ದಿನಾಂಕ:04.08.2025 ರಂದು ವರದಿಯಾಗಿದ್ದ 200/DPS/2025 ದೂರರ್ಜಿಯನ್ನು, , ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸುವಂತೆ ಕರ್ನಾಟಕ ರಾಜ್ಯದ ಮಾನ್ಯ ಡಿ.ಜಿ.ಪಿ & ಐ.ಜಿ.ಪಿ ರವರು ಅದೇಶಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಆ.4ರಂದು ಧರ್ಮಸ್ಥಳ ಠಾಣೆಯಲ್ಲಿ ಇಚಿಲಂಪಾಡಿ ನಿವಾಸಿ ಜಯಂತ್ ಅವರು ನೀಡಿದ ದೂರು ಪ್ರಕರಣ ಹಾಗೂ ಅನಾಮಿಕ ದೂರುದಾರ ಗುರುತಿಸಿದ 6ನೇ ಸ್ಥಳದಲ್ಲಿ ದೊರೆತ ಶವದ ಅವಶೇಷಗಳ ಬಗ್ಗೆ ಆ.1 ರಂದು ಧಮ೯ಸ್ಥಳ ಠಾಣೆಯಲ್ಲಿ ದಾಖಲಾದ ಯು.ಡಿ.ಆರ್ ಪ್ರಕರಣವನ್ನು ಮುಂದಿನ ವಿಚಾರಣೆಗಾಗಿ ಕರ್ನಾಟಕ ರಾಜ್ಯದ ಡಿ.ಜಿ.ಪಿ ಮತ್ತು ಐ.ಜಿ.ಪಿಯವರು ಆದೇಶದಂತೆ ಎಸ್ ಐಟಿ ತನಿಖೆಗೆ ಹಸ್ತಾಂತರಿಸಬೇಕಾಗಿದೆ.

ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ಧರ್ಮಸ್ಥಳ ಗ್ರಾಮದಲ್ಲಿ 15 ವರ್ಷದ ಬಾಲಕಿಯ ಶವವನ್ನು ಯಾವುದೇ ಕಾನೂನು ಪ್ರಕ್ರಿಯೆ ನಡೆಸದೆ ಹೂತು ಹಾಕಲಾಗಿದೆ ಎಂದು ಆರೋಪಿಸಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 200/DPS/2025 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

Related posts

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!