22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಿನಾಂಕ 1.08.2025 ರಂದು ವರದಿಯಾಗಿದ್ದ ಯು.ಡಿ.ಆರ್ ಸಂಖ್ಯೆ: 35/2025, ಕಲಂ: 174 (3) & (VI) ಸಿ.ಆರ್.ಪಿ.ಸಿ ಪ್ರಕರಣ ಹಾಗೂ ದಿನಾಂಕ:04.08.2025 ರಂದು ವರದಿಯಾಗಿದ್ದ 200/DPS/2025 ದೂರರ್ಜಿಯನ್ನು, , ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸುವಂತೆ ಕರ್ನಾಟಕ ರಾಜ್ಯದ ಮಾನ್ಯ ಡಿ.ಜಿ.ಪಿ & ಐ.ಜಿ.ಪಿ ರವರು ಅದೇಶಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಆ.4ರಂದು ಧರ್ಮಸ್ಥಳ ಠಾಣೆಯಲ್ಲಿ ಇಚಿಲಂಪಾಡಿ ನಿವಾಸಿ ಜಯಂತ್ ಅವರು ನೀಡಿದ ದೂರು ಪ್ರಕರಣ ಹಾಗೂ ಅನಾಮಿಕ ದೂರುದಾರ ಗುರುತಿಸಿದ 6ನೇ ಸ್ಥಳದಲ್ಲಿ ದೊರೆತ ಶವದ ಅವಶೇಷಗಳ ಬಗ್ಗೆ ಆ.1 ರಂದು ಧಮ೯ಸ್ಥಳ ಠಾಣೆಯಲ್ಲಿ ದಾಖಲಾದ ಯು.ಡಿ.ಆರ್ ಪ್ರಕರಣವನ್ನು ಮುಂದಿನ ವಿಚಾರಣೆಗಾಗಿ ಕರ್ನಾಟಕ ರಾಜ್ಯದ ಡಿ.ಜಿ.ಪಿ ಮತ್ತು ಐ.ಜಿ.ಪಿಯವರು ಆದೇಶದಂತೆ ಎಸ್ ಐಟಿ ತನಿಖೆಗೆ ಹಸ್ತಾಂತರಿಸಬೇಕಾಗಿದೆ.

ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ಧರ್ಮಸ್ಥಳ ಗ್ರಾಮದಲ್ಲಿ 15 ವರ್ಷದ ಬಾಲಕಿಯ ಶವವನ್ನು ಯಾವುದೇ ಕಾನೂನು ಪ್ರಕ್ರಿಯೆ ನಡೆಸದೆ ಹೂತು ಹಾಕಲಾಗಿದೆ ಎಂದು ಆರೋಪಿಸಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 200/DPS/2025 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

Related posts

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya
error: Content is protected !!