September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

ಮಲವಂತಿಗೆ ಗ್ರಾಮ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ವತಿಯಿಂದ ಕಿಲ್ಲೂರಿನ ಗುರುನಾರಾಯಣ ಸಭಾ ಭವನದಲ್ಲಿ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಕೆನರಾ ಬ್ಯಾಂಕಿನ ವೃತ್ತ ಕಚೇರಿಯ ಎ. ಜಿ. ಎಂ. ನರೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ದ. ಕ. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ ಮಾತನಾಡಿ, ಮಲವಂತಿಗೆ ಗ್ರಾಮದಲ್ಲಿ 100% ಸರ್ಕಾರದ ವಿಮೆ ನೋಂದಣಿ ಆಗಬೇಕಾದರೆ ಜನರ ಸಹಕಾರಬೇಕು ಎಂದು ಹೇಳಿದರು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ವಿ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ ಸುರಕ್ಷಾ ಭೀಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ , ಅಟಲ್ ಪಿಂಚಣಿ ಯೋಜನೆ ಕೆನರಾ ಏಂಜೆಲ್ ಖಾತೆ, ಪೇ ರೋಲ್ ಖಾತೆ, ಮುದ್ರಾ ಸಾಲ ಇ ಕೆ ವೈ ಸಿ ಇತ್ಯಾದಿ ಬಗ್ಗೆ ವಿವರಣೆ ನೀಡಿದರು.

ಪುತ್ತೂರು ಪ್ರಾದೇಶಿಕ ಕಚೇರಿಯ ಡಿ.ಎಂ. ಅಜಿತ್ ಕುಮಾರ್ ಅವರು ಶುಭ ಹಾರೈಸಿದರು. ಮಲವಂತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಮಹಮದ್ ಕಾಜೂರು ಬ್ಯಾಂಕ್ ಸಮಸ್ಯೆಗಳನ್ನು ತಿಳಿಸಿದರು. ಬ್ಯಾಂಕ್ ಅಧಿಕಾರಿಗಳು ಸಮಸ್ಯೆಗಳನ್ನು ಸರಿ ಮಾಡಿ ಕೊಡುತ್ತೇವೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಪಿ. ಡಿ. ಓ. ರಶ್ಮಿ ಅವರು ಸ್ವಾಗತ ಕೋರಿದರು. ನಂತರ ಸರ್ಕಾರದ ವಿಮೆ ನೋಂದಣಿ ಮಾಡಲಾಯಿತು

Related posts

ಕೃಷಿ ಮಾಡಿ ಜೀವನ ನಡೆಸಲು 2 ಎಕರೆ ಡಿಸಿ ಮನ್ನಾ ಭೂಮಿ ನೀಡಿ , ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಸಭೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ನಾಯಕರುಗಳ ಆಗ್ರಹ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya
error: Content is protected !!