July 23, 2026
ಅಪಘಾತಗ್ರಾಮಾಂತರ ಸುದ್ದಿವರದಿಸಮಸ್ಯೆ

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

ಶಿಶಿಲ: ಇಂದು (ಆ. 5)ಸಂಜೆ ಪ್ರಾರಂಭವಾದ ಮಳೆ ಎಡೆಬಿಡದೆ ಬರುತ್ತಿದ್ದು ಶಿಶಿಲ ಪರಿಸರದಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.ಶಿಶಿಲೇಶ್ವರ ದೇವಸ್ಥಾನದೊಳಗೆ ನೀರು ನುಗ್ಗಿ ಪರಿಸ್ಥಿತಿ ಹದಗೆಟ್ಟಿರುತ್ತದೆ. ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ರಸ್ತೆಗೆ ಜರಿದು ಅರಸಿನಮಕ್ಕಿ- ಶಿಶಿಲ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.

ಬರ್ಗುಳ ಎಂಬಲ್ಲಿ ಅರಣ್ಯದಿಂದ ಬರುವ ನೀರು ರಸ್ತೆಯನ್ನು ಸಂಪೂರ್ಣವಾಗಿ ಆವರಿಸಿ ಹೊಳೆಯಂತಾಗಿ ವಾಹನ ಸಂಚರಿಸಲು ಆಗದಂತ ಪರಿಸ್ಥಿತಿ ಉಂಟಾಗಿದೆ. ಮುಚ್ಚಿರಡ್ಕ ಕೃಷ್ಣಪ್ಪ ಗೌಡರವರ ಮನೆಯ ಬಳಿ ಗುಡ್ಡ ಜರಿದು ಮನೆಗೆ ಅಲ್ಪ ಪ್ರಮಾಣದ ಹಾನಿಯಾಗಿದೆ. ರಸ್ತೆ -ಹಳ್ಳ ತೋಡುಗಳು ನೀರಿನಿಂದ ತುಂಬಿವೆ.

ಪರಿಸ್ಥಿತಿಯನ್ನು ನಿಭಾಯಿಸಲು ಗ್ರಾ.ಪಂ. ಅಧ್ಯಕ್ಷ ಸುಧೀನ್, ಶೌರ್ಯ ವಿಪತ್ತು ನಿರ್ವಹಣಾ ತಂಡ, ಗ್ರಾ.ಪಂ ಹಾಗೂ ಗ್ರಾಮಸ್ಥರು ಶ್ರಮಿಸುತ್ತಿದ್ದಾರೆ. ರಸ್ತೆಗೆ ಬಿದ್ದ ಮಣ್ಣನ್ನು ತೆಗೆಯಲು ಹಿಟಾಚಿ ಮೂಲಕ ಪ್ರಯತ್ನಿಸಲಾಗುತ್ತಿದೆ.ಅರಸಿನಮಕ್ಕಿಯಿಂದ ಬೂಡುಮುಗೇರು ಕಡೆ ಬರುವಲ್ಲಿ ಕೂಡಾ ಬರೆ ಜರಿದು ರಸ್ತೆಗೆ ಮಣ್ಣು ಬಿದ್ದಿದ್ದೆ. ಪಟ್ರಮೆ ಮಸೀದಿ ಬಳಿ ನದಿ ನೀರು ರಸ್ತೆಗೆ ಬಂದಿರುತ್ತದೆ. ಮಣಿಯೇರು ರಸ್ತೆ, ಕೂಟೇಲು ಬಳಿ ನೀರು ತುಂಬಿ ಸಂಪರ್ಕ ಕಡಿದಿದೆ.

Related posts

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya
error: Content is protected !!