March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಆ.5ರಂದು ಆಟಿಡೊಂಜಿ ದಿನ ಸ್ನೇಹಭೋಜನ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು ಮತ್ತು ಟ್ರಸ್ಟಿ ಸದಸ್ಯರಾದ ಶ್ರೀ ಮತಿ ಮೇರಿ ಯು ಪಿ ಯವರ ನೇತೃತ್ವದಲ್ಲಿ ಆಶ್ರಮ ನಿವಾಸಿಗಳಿಗಾಗಿ ಆಟಿ ತಿಂಗಳಿನಲ್ಲಿ ಸೇವಿಸುವ ವಿವಿಧ ಆಹಾರ ಪದಾರ್ಥಗಳನ್ನು ತಯಾರಿಸಲಾಯಿತು. ಸ್ನೇಹಭೋಜನ ಕೂಟವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಸಂಸ್ಥೆಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿ ಯವರು ಆಟಿ ತಿಂಗಳ ಆಚರಣೆ ಮತ್ತು ಆಟಿ ತಿಂಗಳಿನಲ್ಲಿ ಸೇವಿಸುವ ಆಹಾರ ಪದಾರ್ಥಗಳ ಔಷಧೀಯ ಗುಣಗಳು, ಮತ್ತು ತುಳು ನಾಡಿನ ಸಂಸ್ಕೃತಿಯ ವೈಶಿಷ್ಟ್ಯತೆಗಳ ಕುರಿತು ಸಂಕ್ಷಿಪ್ತವಾಗಿ ಹಾಗೂ ಅರ್ಥಪೂರ್ಣವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಟ್ರಸ್ಟಿ ಸದಸ್ಯರು , ಸಿಬ್ಬಂದಿವರ್ಗದವರು ಮತ್ತು ಆಶ್ರಮ ನಿವಾಸಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya
error: Content is protected !!