July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಆ.5ರಂದು ಆಟಿಡೊಂಜಿ ದಿನ ಸ್ನೇಹಭೋಜನ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು ಮತ್ತು ಟ್ರಸ್ಟಿ ಸದಸ್ಯರಾದ ಶ್ರೀ ಮತಿ ಮೇರಿ ಯು ಪಿ ಯವರ ನೇತೃತ್ವದಲ್ಲಿ ಆಶ್ರಮ ನಿವಾಸಿಗಳಿಗಾಗಿ ಆಟಿ ತಿಂಗಳಿನಲ್ಲಿ ಸೇವಿಸುವ ವಿವಿಧ ಆಹಾರ ಪದಾರ್ಥಗಳನ್ನು ತಯಾರಿಸಲಾಯಿತು. ಸ್ನೇಹಭೋಜನ ಕೂಟವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಸಂಸ್ಥೆಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿ ಯವರು ಆಟಿ ತಿಂಗಳ ಆಚರಣೆ ಮತ್ತು ಆಟಿ ತಿಂಗಳಿನಲ್ಲಿ ಸೇವಿಸುವ ಆಹಾರ ಪದಾರ್ಥಗಳ ಔಷಧೀಯ ಗುಣಗಳು, ಮತ್ತು ತುಳು ನಾಡಿನ ಸಂಸ್ಕೃತಿಯ ವೈಶಿಷ್ಟ್ಯತೆಗಳ ಕುರಿತು ಸಂಕ್ಷಿಪ್ತವಾಗಿ ಹಾಗೂ ಅರ್ಥಪೂರ್ಣವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಟ್ರಸ್ಟಿ ಸದಸ್ಯರು , ಸಿಬ್ಬಂದಿವರ್ಗದವರು ಮತ್ತು ಆಶ್ರಮ ನಿವಾಸಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!