23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಯು.ಡಿ.ಆರ್ ಮತ್ತು ಒಂದು ದೂರು ಅರ್ಜಿ ಸೇರಿದಂತೆ ಒಟ್ಟು ಮೂರು ಪ್ರಕರಣವನ್ನು ಡಿಜಿ ಮತ್ತು ಐಜಿಪಿಯವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡಕ್ಕೆ (ಎಸ್.ಐ.ಟಿ)ಗೆ ಹಸ್ತಾಂತರಿಸಲಾಗಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ: ೩೯/೨೦೨೫ ಕಲಂ:೨೧೧(J) BNS ಪ್ರಕರಣವನ್ನು ದಿನಾಂಕ: ೧೯.೦೭.೨೦೨೫ ರಂದು ವಿಶೇಷ ತನಿಖಾ ತಂಡ (SIT) ಕ್ಕೆ ವರ್ಗಾಯಿಸಲಾಗಿರುತ್ತದೆ. ಇದರ ಹೊರತಾಗಿ ಈವರೆಗೆ ಎಸ್.ಐ.ಟಿ ತಂಡದಿಂದ ಎರಡು ಅಸ್ವಾಭಾವಿಕ ಮರಣ (ಯುಡಿಆರ್) ಪ್ರಕರಣದ ದೂರುಗಳು ಮತ್ತು ಜಯಂತ್ ಎಂಬವರಿಂದ ಒಂದು ದೂರರ್ಜಿಯು ಧರ್ಮಸ್ಥಳ ಪೊಲೀಸ್ ಠಾಣೆಗೆ ವರದಿಯಾಗಿರುತ್ತದೆ.


ದಿನಾಂಕ: ೩೧.೦೭.೨೦೨೫ ರಂದು ಎಸ್.ಐ.ಟಿ ತಂಡ ಉತ್ಖನನ ಮಾಡುತ್ತಿದ್ದಾಗ ಒಂದು ಸ್ಥಳದಲ್ಲಿ ದೊರೆತ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ:೩೫/೨೦೨೫ ಪ್ರಕರಣ ದಾಖಲಾಗಿದೆ.
ಈಗಾಗಲೇ ಉತ್ಖನನಕ್ಕಾಗಿ ನಿಗಧಿಪಡಿಸಲಾಗಿರುವ ಸ್ಥಳಗಳ ಹೊರತಾಗಿ, ದಿನಾಂಕ: ೦೪.೦೮.೨೦೨೫ ರಂದು ಬೇರೆ ಜಾಗದಲ್ಲಿ, ಮಣ್ಣಿನ ಮೇಲೆ ಕಂಡುಬಂದ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ದಿನಾಂಕ:೦೫.೦೮.೨೫ ರಂದು ಯು.ಡಿ.ಆರ್ ಸಂಖ್ಯೆ:೩೬/೨೦೨೫ ಪ್ರಕರಣ ದಾಖಲಾಗಿದೆ.


ಜಯಂತ್ ಎಂಬವರು ನೀಡಿದ ದೂರಿಗೆ ಸಂಬಂಧಿಸಿದಂತೆ, ದಿನಾಂಕ: ೦೪.೦೮.೨೦೨೫ ರಂದು ಧರ್ಮಸ್ಥಳ ಠಾಣೆಯಲ್ಲಿ ೨೦೦/DPS/೨೦೨೫ ರಂತೆ ದಾಖಲಾಗಿರುವ ದೂರರ್ಜಿ ದಾಖಲಾಗಿದೆ. ಸದ್ರಿ ೦೨ ಯು.ಡಿ.ಆರ್ ಪ್ರಕರಣಗಳನ್ನು ಮತ್ತು ೦೧ ದೂರರ್ಜಿಯನ್ನು ಕೂಡಾ, ಡಿಜಿ ಮತ್ತು ಐಜಿಪಿರವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡ (SIT)ಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

Related posts

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya
error: Content is protected !!