July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಯು.ಡಿ.ಆರ್ ಮತ್ತು ಒಂದು ದೂರು ಅರ್ಜಿ ಸೇರಿದಂತೆ ಒಟ್ಟು ಮೂರು ಪ್ರಕರಣವನ್ನು ಡಿಜಿ ಮತ್ತು ಐಜಿಪಿಯವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡಕ್ಕೆ (ಎಸ್.ಐ.ಟಿ)ಗೆ ಹಸ್ತಾಂತರಿಸಲಾಗಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ: ೩೯/೨೦೨೫ ಕಲಂ:೨೧೧(J) BNS ಪ್ರಕರಣವನ್ನು ದಿನಾಂಕ: ೧೯.೦೭.೨೦೨೫ ರಂದು ವಿಶೇಷ ತನಿಖಾ ತಂಡ (SIT) ಕ್ಕೆ ವರ್ಗಾಯಿಸಲಾಗಿರುತ್ತದೆ. ಇದರ ಹೊರತಾಗಿ ಈವರೆಗೆ ಎಸ್.ಐ.ಟಿ ತಂಡದಿಂದ ಎರಡು ಅಸ್ವಾಭಾವಿಕ ಮರಣ (ಯುಡಿಆರ್) ಪ್ರಕರಣದ ದೂರುಗಳು ಮತ್ತು ಜಯಂತ್ ಎಂಬವರಿಂದ ಒಂದು ದೂರರ್ಜಿಯು ಧರ್ಮಸ್ಥಳ ಪೊಲೀಸ್ ಠಾಣೆಗೆ ವರದಿಯಾಗಿರುತ್ತದೆ.


ದಿನಾಂಕ: ೩೧.೦೭.೨೦೨೫ ರಂದು ಎಸ್.ಐ.ಟಿ ತಂಡ ಉತ್ಖನನ ಮಾಡುತ್ತಿದ್ದಾಗ ಒಂದು ಸ್ಥಳದಲ್ಲಿ ದೊರೆತ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ:೩೫/೨೦೨೫ ಪ್ರಕರಣ ದಾಖಲಾಗಿದೆ.
ಈಗಾಗಲೇ ಉತ್ಖನನಕ್ಕಾಗಿ ನಿಗಧಿಪಡಿಸಲಾಗಿರುವ ಸ್ಥಳಗಳ ಹೊರತಾಗಿ, ದಿನಾಂಕ: ೦೪.೦೮.೨೦೨೫ ರಂದು ಬೇರೆ ಜಾಗದಲ್ಲಿ, ಮಣ್ಣಿನ ಮೇಲೆ ಕಂಡುಬಂದ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ದಿನಾಂಕ:೦೫.೦೮.೨೫ ರಂದು ಯು.ಡಿ.ಆರ್ ಸಂಖ್ಯೆ:೩೬/೨೦೨೫ ಪ್ರಕರಣ ದಾಖಲಾಗಿದೆ.


ಜಯಂತ್ ಎಂಬವರು ನೀಡಿದ ದೂರಿಗೆ ಸಂಬಂಧಿಸಿದಂತೆ, ದಿನಾಂಕ: ೦೪.೦೮.೨೦೨೫ ರಂದು ಧರ್ಮಸ್ಥಳ ಠಾಣೆಯಲ್ಲಿ ೨೦೦/DPS/೨೦೨೫ ರಂತೆ ದಾಖಲಾಗಿರುವ ದೂರರ್ಜಿ ದಾಖಲಾಗಿದೆ. ಸದ್ರಿ ೦೨ ಯು.ಡಿ.ಆರ್ ಪ್ರಕರಣಗಳನ್ನು ಮತ್ತು ೦೧ ದೂರರ್ಜಿಯನ್ನು ಕೂಡಾ, ಡಿಜಿ ಮತ್ತು ಐಜಿಪಿರವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡ (SIT)ಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

Related posts

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ: ಗ್ರಾಮೀಣ ಮಟ್ಟದ ಪುಸ್ತಕೋತ್ಸವ ಪುಸ್ತಕ ಪ್ರದರ್ಶನ ಮತ್ತು ಮಾರಾಟ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!