July 23, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಶ್ರೀ ಕೃಷ್ಣನ ವೇಷಧಾರಿಯಾದ ‘ರವಿ ರಾಮಕುಂಜ’ ಎಂಬವರು ಹಿಂದೂಗಳ ಆರಾಧ್ಯ ದೇವರಾದ ಶ್ರೀ ಕೃಷ್ಣ ಪರಮಾತ್ಮನ ವೇಷಧರಿಸಿಕೊಂಡು ಅಶ್ಲೀಲ ಭಂಗಿ ಮತ್ತು ಅಶ್ಲೀಲ ಪದ ಕೊಳಲು ಊದುವಾಗ ಶ್ರೀ ಕೃಷ್ಣನ ಇನ್ನೊಂದು ಹೆಸರಾದ ಮುರಾರಿ ಬಗ್ಗೆ ‘ಆಯೆ ಸೈತೆ’ ಅಲ್ಲದೆ ಕೃಷ್ಣ ವೇಶಧಾರಿ ಹಾಲಿಂಗನ ಮಾಡುವುದು ಅಸಂಬದ್ಧ ಶಬ್ದಗಳೊಂದಿಗೆ ಅನಾಗರಿಕವಾಗಿ ನಟಿಸಿ, ವರ್ತಿಸಿದ್ದು ಇದು ಹಿಂದುಗಳ ಧಾರ್ಮಿಕ ಭಾವನೆಗೆ ತೀವ್ರಗಾಸಿ ಉಂಟುಮಾಡುತ್ತದೆ.


ಧಾರ್ಮಿಕ ನಂಬಿಕೆ ಮತ್ತು ಆರಾಧನೆಗೆ ಧಕ್ಕೆಯಾಗದಂತೆ ಕಾನೂನಿನಲ್ಲಿ ಉಲ್ಲೇಖವಿದ್ದರೂ ಈ ರೀತಿಯ ಘಟನೆಗಳು ಮರುಕಳಿಸುವುದರಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿ ಸಮುದಾಯದ ಒಳಗೆ ಗಲಭೆಗಳು ಆಗುವ ಸಾಧ್ಯತೆ ಇರುತ್ತದೆ ಆದ್ದರಿಂದ ತಾವುಗಳು ಸದ್ರಿ ಕಲಾವಿದ ರವಿ ರಾಮಕುಂಜ’ ಮತ್ತು ನಿರ್ದೇಶಕ ಪುಷ್ಪರಾಜ್’ ಹಾಗೂ ಕಾರ್ಯಕ್ರಮದ ಆಯೋಜಕರಾದ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿಯ ಖ್ಯಾತ ನ್ಯಾಯವಾದಿ ಉದಯ ಕುಮಾರ್ ಬಿ.ಕೆ., ವಿಶ್ವ ಹಿಂದು ಪರಿಷತ್ತು ಬೆಳ್ತಂಗಡಿ ಪ್ರಖಂಡ ಸೇವಾಪ್ರಮುಖ್ ಮೋಹನ್ ಬೆಳ್ತಂಗಡಿ, ಸಾಮಾಜಿಕ ಹೋರಾಟಗಾರರಾದ ಕೇಶವ ಗೌಡ, ಜಗದೀಶ್, ಮೋಹನ್ ಬಂಗೇರ, ಶೇಖರ್ ಕುಲಾಲ್, ಕಮಲಾಕ್ಷ ಇನ್ನಿತರರು ಉಪಸ್ಥಿತರಿದ್ದರು.

Related posts

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ1.20 ಲಕ್ಷ ಮೌಲ್ಯದ ಬುಲೆಟ್ ಬೈಕ್ಕಳವು

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya
error: Content is protected !!