27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಆ.5ರಂದು ಆಟಿಡೊಂಜಿ ದಿನ ಸ್ನೇಹಭೋಜನ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು ಮತ್ತು ಟ್ರಸ್ಟಿ ಸದಸ್ಯರಾದ ಶ್ರೀ ಮತಿ ಮೇರಿ ಯು ಪಿ ಯವರ ನೇತೃತ್ವದಲ್ಲಿ ಆಶ್ರಮ ನಿವಾಸಿಗಳಿಗಾಗಿ ಆಟಿ ತಿಂಗಳಿನಲ್ಲಿ ಸೇವಿಸುವ ವಿವಿಧ ಆಹಾರ ಪದಾರ್ಥಗಳನ್ನು ತಯಾರಿಸಲಾಯಿತು. ಸ್ನೇಹಭೋಜನ ಕೂಟವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಸಂಸ್ಥೆಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿ ಯವರು ಆಟಿ ತಿಂಗಳ ಆಚರಣೆ ಮತ್ತು ಆಟಿ ತಿಂಗಳಿನಲ್ಲಿ ಸೇವಿಸುವ ಆಹಾರ ಪದಾರ್ಥಗಳ ಔಷಧೀಯ ಗುಣಗಳು, ಮತ್ತು ತುಳು ನಾಡಿನ ಸಂಸ್ಕೃತಿಯ ವೈಶಿಷ್ಟ್ಯತೆಗಳ ಕುರಿತು ಸಂಕ್ಷಿಪ್ತವಾಗಿ ಹಾಗೂ ಅರ್ಥಪೂರ್ಣವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಟ್ರಸ್ಟಿ ಸದಸ್ಯರು , ಸಿಬ್ಬಂದಿವರ್ಗದವರು ಮತ್ತು ಆಶ್ರಮ ನಿವಾಸಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.

Related posts

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!