23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಯು.ಡಿ.ಆರ್ ಮತ್ತು ಒಂದು ದೂರು ಅರ್ಜಿ ಸೇರಿದಂತೆ ಒಟ್ಟು ಮೂರು ಪ್ರಕರಣವನ್ನು ಡಿಜಿ ಮತ್ತು ಐಜಿಪಿಯವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡಕ್ಕೆ (ಎಸ್.ಐ.ಟಿ)ಗೆ ಹಸ್ತಾಂತರಿಸಲಾಗಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ: ೩೯/೨೦೨೫ ಕಲಂ:೨೧೧(J) BNS ಪ್ರಕರಣವನ್ನು ದಿನಾಂಕ: ೧೯.೦೭.೨೦೨೫ ರಂದು ವಿಶೇಷ ತನಿಖಾ ತಂಡ (SIT) ಕ್ಕೆ ವರ್ಗಾಯಿಸಲಾಗಿರುತ್ತದೆ. ಇದರ ಹೊರತಾಗಿ ಈವರೆಗೆ ಎಸ್.ಐ.ಟಿ ತಂಡದಿಂದ ಎರಡು ಅಸ್ವಾಭಾವಿಕ ಮರಣ (ಯುಡಿಆರ್) ಪ್ರಕರಣದ ದೂರುಗಳು ಮತ್ತು ಜಯಂತ್ ಎಂಬವರಿಂದ ಒಂದು ದೂರರ್ಜಿಯು ಧರ್ಮಸ್ಥಳ ಪೊಲೀಸ್ ಠಾಣೆಗೆ ವರದಿಯಾಗಿರುತ್ತದೆ.


ದಿನಾಂಕ: ೩೧.೦೭.೨೦೨೫ ರಂದು ಎಸ್.ಐ.ಟಿ ತಂಡ ಉತ್ಖನನ ಮಾಡುತ್ತಿದ್ದಾಗ ಒಂದು ಸ್ಥಳದಲ್ಲಿ ದೊರೆತ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ:೩೫/೨೦೨೫ ಪ್ರಕರಣ ದಾಖಲಾಗಿದೆ.
ಈಗಾಗಲೇ ಉತ್ಖನನಕ್ಕಾಗಿ ನಿಗಧಿಪಡಿಸಲಾಗಿರುವ ಸ್ಥಳಗಳ ಹೊರತಾಗಿ, ದಿನಾಂಕ: ೦೪.೦೮.೨೦೨೫ ರಂದು ಬೇರೆ ಜಾಗದಲ್ಲಿ, ಮಣ್ಣಿನ ಮೇಲೆ ಕಂಡುಬಂದ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ದಿನಾಂಕ:೦೫.೦೮.೨೫ ರಂದು ಯು.ಡಿ.ಆರ್ ಸಂಖ್ಯೆ:೩೬/೨೦೨೫ ಪ್ರಕರಣ ದಾಖಲಾಗಿದೆ.


ಜಯಂತ್ ಎಂಬವರು ನೀಡಿದ ದೂರಿಗೆ ಸಂಬಂಧಿಸಿದಂತೆ, ದಿನಾಂಕ: ೦೪.೦೮.೨೦೨೫ ರಂದು ಧರ್ಮಸ್ಥಳ ಠಾಣೆಯಲ್ಲಿ ೨೦೦/DPS/೨೦೨೫ ರಂತೆ ದಾಖಲಾಗಿರುವ ದೂರರ್ಜಿ ದಾಖಲಾಗಿದೆ. ಸದ್ರಿ ೦೨ ಯು.ಡಿ.ಆರ್ ಪ್ರಕರಣಗಳನ್ನು ಮತ್ತು ೦೧ ದೂರರ್ಜಿಯನ್ನು ಕೂಡಾ, ಡಿಜಿ ಮತ್ತು ಐಜಿಪಿರವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡ (SIT)ಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

Related posts

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!