25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಯು.ಡಿ.ಆರ್ ಮತ್ತು ಒಂದು ದೂರು ಅರ್ಜಿ ಸೇರಿದಂತೆ ಒಟ್ಟು ಮೂರು ಪ್ರಕರಣವನ್ನು ಡಿಜಿ ಮತ್ತು ಐಜಿಪಿಯವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡಕ್ಕೆ (ಎಸ್.ಐ.ಟಿ)ಗೆ ಹಸ್ತಾಂತರಿಸಲಾಗಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ: ೩೯/೨೦೨೫ ಕಲಂ:೨೧೧(J) BNS ಪ್ರಕರಣವನ್ನು ದಿನಾಂಕ: ೧೯.೦೭.೨೦೨೫ ರಂದು ವಿಶೇಷ ತನಿಖಾ ತಂಡ (SIT) ಕ್ಕೆ ವರ್ಗಾಯಿಸಲಾಗಿರುತ್ತದೆ. ಇದರ ಹೊರತಾಗಿ ಈವರೆಗೆ ಎಸ್.ಐ.ಟಿ ತಂಡದಿಂದ ಎರಡು ಅಸ್ವಾಭಾವಿಕ ಮರಣ (ಯುಡಿಆರ್) ಪ್ರಕರಣದ ದೂರುಗಳು ಮತ್ತು ಜಯಂತ್ ಎಂಬವರಿಂದ ಒಂದು ದೂರರ್ಜಿಯು ಧರ್ಮಸ್ಥಳ ಪೊಲೀಸ್ ಠಾಣೆಗೆ ವರದಿಯಾಗಿರುತ್ತದೆ.


ದಿನಾಂಕ: ೩೧.೦೭.೨೦೨೫ ರಂದು ಎಸ್.ಐ.ಟಿ ತಂಡ ಉತ್ಖನನ ಮಾಡುತ್ತಿದ್ದಾಗ ಒಂದು ಸ್ಥಳದಲ್ಲಿ ದೊರೆತ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ:೩೫/೨೦೨೫ ಪ್ರಕರಣ ದಾಖಲಾಗಿದೆ.
ಈಗಾಗಲೇ ಉತ್ಖನನಕ್ಕಾಗಿ ನಿಗಧಿಪಡಿಸಲಾಗಿರುವ ಸ್ಥಳಗಳ ಹೊರತಾಗಿ, ದಿನಾಂಕ: ೦೪.೦೮.೨೦೨೫ ರಂದು ಬೇರೆ ಜಾಗದಲ್ಲಿ, ಮಣ್ಣಿನ ಮೇಲೆ ಕಂಡುಬಂದ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ದಿನಾಂಕ:೦೫.೦೮.೨೫ ರಂದು ಯು.ಡಿ.ಆರ್ ಸಂಖ್ಯೆ:೩೬/೨೦೨೫ ಪ್ರಕರಣ ದಾಖಲಾಗಿದೆ.


ಜಯಂತ್ ಎಂಬವರು ನೀಡಿದ ದೂರಿಗೆ ಸಂಬಂಧಿಸಿದಂತೆ, ದಿನಾಂಕ: ೦೪.೦೮.೨೦೨೫ ರಂದು ಧರ್ಮಸ್ಥಳ ಠಾಣೆಯಲ್ಲಿ ೨೦೦/DPS/೨೦೨೫ ರಂತೆ ದಾಖಲಾಗಿರುವ ದೂರರ್ಜಿ ದಾಖಲಾಗಿದೆ. ಸದ್ರಿ ೦೨ ಯು.ಡಿ.ಆರ್ ಪ್ರಕರಣಗಳನ್ನು ಮತ್ತು ೦೧ ದೂರರ್ಜಿಯನ್ನು ಕೂಡಾ, ಡಿಜಿ ಮತ್ತು ಐಜಿಪಿರವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡ (SIT)ಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

Related posts

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!