September 6, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಶ್ರೀ ಕೃಷ್ಣನ ವೇಷಧಾರಿಯಾದ ‘ರವಿ ರಾಮಕುಂಜ’ ಎಂಬವರು ಹಿಂದೂಗಳ ಆರಾಧ್ಯ ದೇವರಾದ ಶ್ರೀ ಕೃಷ್ಣ ಪರಮಾತ್ಮನ ವೇಷಧರಿಸಿಕೊಂಡು ಅಶ್ಲೀಲ ಭಂಗಿ ಮತ್ತು ಅಶ್ಲೀಲ ಪದ ಕೊಳಲು ಊದುವಾಗ ಶ್ರೀ ಕೃಷ್ಣನ ಇನ್ನೊಂದು ಹೆಸರಾದ ಮುರಾರಿ ಬಗ್ಗೆ ‘ಆಯೆ ಸೈತೆ’ ಅಲ್ಲದೆ ಕೃಷ್ಣ ವೇಶಧಾರಿ ಹಾಲಿಂಗನ ಮಾಡುವುದು ಅಸಂಬದ್ಧ ಶಬ್ದಗಳೊಂದಿಗೆ ಅನಾಗರಿಕವಾಗಿ ನಟಿಸಿ, ವರ್ತಿಸಿದ್ದು ಇದು ಹಿಂದುಗಳ ಧಾರ್ಮಿಕ ಭಾವನೆಗೆ ತೀವ್ರಗಾಸಿ ಉಂಟುಮಾಡುತ್ತದೆ.


ಧಾರ್ಮಿಕ ನಂಬಿಕೆ ಮತ್ತು ಆರಾಧನೆಗೆ ಧಕ್ಕೆಯಾಗದಂತೆ ಕಾನೂನಿನಲ್ಲಿ ಉಲ್ಲೇಖವಿದ್ದರೂ ಈ ರೀತಿಯ ಘಟನೆಗಳು ಮರುಕಳಿಸುವುದರಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿ ಸಮುದಾಯದ ಒಳಗೆ ಗಲಭೆಗಳು ಆಗುವ ಸಾಧ್ಯತೆ ಇರುತ್ತದೆ ಆದ್ದರಿಂದ ತಾವುಗಳು ಸದ್ರಿ ಕಲಾವಿದ ರವಿ ರಾಮಕುಂಜ’ ಮತ್ತು ನಿರ್ದೇಶಕ ಪುಷ್ಪರಾಜ್’ ಹಾಗೂ ಕಾರ್ಯಕ್ರಮದ ಆಯೋಜಕರಾದ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿಯ ಖ್ಯಾತ ನ್ಯಾಯವಾದಿ ಉದಯ ಕುಮಾರ್ ಬಿ.ಕೆ., ವಿಶ್ವ ಹಿಂದು ಪರಿಷತ್ತು ಬೆಳ್ತಂಗಡಿ ಪ್ರಖಂಡ ಸೇವಾಪ್ರಮುಖ್ ಮೋಹನ್ ಬೆಳ್ತಂಗಡಿ, ಸಾಮಾಜಿಕ ಹೋರಾಟಗಾರರಾದ ಕೇಶವ ಗೌಡ, ಜಗದೀಶ್, ಮೋಹನ್ ಬಂಗೇರ, ಶೇಖರ್ ಕುಲಾಲ್, ಕಮಲಾಕ್ಷ ಇನ್ನಿತರರು ಉಪಸ್ಥಿತರಿದ್ದರು.

Related posts

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!