July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಆ.5ರಂದು ಆಟಿಡೊಂಜಿ ದಿನ ಸ್ನೇಹಭೋಜನ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು ಮತ್ತು ಟ್ರಸ್ಟಿ ಸದಸ್ಯರಾದ ಶ್ರೀ ಮತಿ ಮೇರಿ ಯು ಪಿ ಯವರ ನೇತೃತ್ವದಲ್ಲಿ ಆಶ್ರಮ ನಿವಾಸಿಗಳಿಗಾಗಿ ಆಟಿ ತಿಂಗಳಿನಲ್ಲಿ ಸೇವಿಸುವ ವಿವಿಧ ಆಹಾರ ಪದಾರ್ಥಗಳನ್ನು ತಯಾರಿಸಲಾಯಿತು. ಸ್ನೇಹಭೋಜನ ಕೂಟವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಸಂಸ್ಥೆಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿ ಯವರು ಆಟಿ ತಿಂಗಳ ಆಚರಣೆ ಮತ್ತು ಆಟಿ ತಿಂಗಳಿನಲ್ಲಿ ಸೇವಿಸುವ ಆಹಾರ ಪದಾರ್ಥಗಳ ಔಷಧೀಯ ಗುಣಗಳು, ಮತ್ತು ತುಳು ನಾಡಿನ ಸಂಸ್ಕೃತಿಯ ವೈಶಿಷ್ಟ್ಯತೆಗಳ ಕುರಿತು ಸಂಕ್ಷಿಪ್ತವಾಗಿ ಹಾಗೂ ಅರ್ಥಪೂರ್ಣವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಟ್ರಸ್ಟಿ ಸದಸ್ಯರು , ಸಿಬ್ಬಂದಿವರ್ಗದವರು ಮತ್ತು ಆಶ್ರಮ ನಿವಾಸಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.

Related posts

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya
error: Content is protected !!