September 6, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಶ್ರೀ ಕೃಷ್ಣನ ವೇಷಧಾರಿಯಾದ ‘ರವಿ ರಾಮಕುಂಜ’ ಎಂಬವರು ಹಿಂದೂಗಳ ಆರಾಧ್ಯ ದೇವರಾದ ಶ್ರೀ ಕೃಷ್ಣ ಪರಮಾತ್ಮನ ವೇಷಧರಿಸಿಕೊಂಡು ಅಶ್ಲೀಲ ಭಂಗಿ ಮತ್ತು ಅಶ್ಲೀಲ ಪದ ಕೊಳಲು ಊದುವಾಗ ಶ್ರೀ ಕೃಷ್ಣನ ಇನ್ನೊಂದು ಹೆಸರಾದ ಮುರಾರಿ ಬಗ್ಗೆ ‘ಆಯೆ ಸೈತೆ’ ಅಲ್ಲದೆ ಕೃಷ್ಣ ವೇಶಧಾರಿ ಹಾಲಿಂಗನ ಮಾಡುವುದು ಅಸಂಬದ್ಧ ಶಬ್ದಗಳೊಂದಿಗೆ ಅನಾಗರಿಕವಾಗಿ ನಟಿಸಿ, ವರ್ತಿಸಿದ್ದು ಇದು ಹಿಂದುಗಳ ಧಾರ್ಮಿಕ ಭಾವನೆಗೆ ತೀವ್ರಗಾಸಿ ಉಂಟುಮಾಡುತ್ತದೆ.


ಧಾರ್ಮಿಕ ನಂಬಿಕೆ ಮತ್ತು ಆರಾಧನೆಗೆ ಧಕ್ಕೆಯಾಗದಂತೆ ಕಾನೂನಿನಲ್ಲಿ ಉಲ್ಲೇಖವಿದ್ದರೂ ಈ ರೀತಿಯ ಘಟನೆಗಳು ಮರುಕಳಿಸುವುದರಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿ ಸಮುದಾಯದ ಒಳಗೆ ಗಲಭೆಗಳು ಆಗುವ ಸಾಧ್ಯತೆ ಇರುತ್ತದೆ ಆದ್ದರಿಂದ ತಾವುಗಳು ಸದ್ರಿ ಕಲಾವಿದ ರವಿ ರಾಮಕುಂಜ’ ಮತ್ತು ನಿರ್ದೇಶಕ ಪುಷ್ಪರಾಜ್’ ಹಾಗೂ ಕಾರ್ಯಕ್ರಮದ ಆಯೋಜಕರಾದ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿಯ ಖ್ಯಾತ ನ್ಯಾಯವಾದಿ ಉದಯ ಕುಮಾರ್ ಬಿ.ಕೆ., ವಿಶ್ವ ಹಿಂದು ಪರಿಷತ್ತು ಬೆಳ್ತಂಗಡಿ ಪ್ರಖಂಡ ಸೇವಾಪ್ರಮುಖ್ ಮೋಹನ್ ಬೆಳ್ತಂಗಡಿ, ಸಾಮಾಜಿಕ ಹೋರಾಟಗಾರರಾದ ಕೇಶವ ಗೌಡ, ಜಗದೀಶ್, ಮೋಹನ್ ಬಂಗೇರ, ಶೇಖರ್ ಕುಲಾಲ್, ಕಮಲಾಕ್ಷ ಇನ್ನಿತರರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!