22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಹಾಗೂ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ ಉಜಿರೆ ಇವರ ಸಹಯೋಗದಲ್ಲಿ ಒಂದು ದಿನದ ರೈತ ತರಬೇತಿ ಕಾರ್ಯಕ್ರಮ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಅರ್ಚಕರಾದ ಕೃಷ್ಣ ಹೊಳ್ಳ ರವರ ಅಧ್ಯಕ್ಷತೆಯಲ್ಲಿ ಆ.6ರಂದು ನಡೆಯಿತು.

ಕೃಷಿ ಸಖಿ ಭಾಗೀರಥಿ ಇವರು ವಾಸ್ತವಿಕವಾಗಿ ಮಾತಾಡಿ ಬೆಳೆ ವಿಮೆ ಬೆಳೆ ಸಮೀಕ್ಷೆಯ ಬಗ್ಗೆ ಹಾಗೂ ರೈತ ತರಬೇತಿಯ ಮಹತ್ವವನ್ನು ತಿಳಿಸಿದರು.

ಸಭೆಯನ್ನು ಉದ್ಘಾಟಿಸಿ ಮಾತಾಡಿದ ಅರ್ಚಕರಾದ ಕೃಷ್ಣ ಹೊಳ್ಳ ಇದು ಬಹಳ ಉತ್ತಮವಾದ ಕಾರ್ಯಕ್ರಮ ನಾವು ರೈತರು ಮಾಡುವ ತಪ್ಪುಗಳನ್ನು ತಿದ್ದಿಕೊಂಡು ಇಂತಹ ತರಬೇತಿಯಲ್ಲಿ ಮಾಹಿತಿ ಪಡೆದು ಅಭಿವೃದ್ಧಿ ಹೊಂದಬೇಕು ಎಂದು ಶುಭ ಹಾರೈಸಿದರು. ಕೃಷಿ ಇಲಾಖೆಯ ನವನೀತ ಮಾತಾಡಿ , ನ್ಯಾಚುರಲ್ ಫಾರ್ಮಿಂಗ್ ಬೆಳೆ ಸಮೀಕ್ಷೆ ಬೆಳೆ ವಿಮೆ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳು ಹಾಗೂ ಅದನ್ನು ಪಡೆದುಕೊಳ್ಳುವ ವಿಧಾನಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾದ ಪ್ರಭಾಕರಮಯ್ಯ ಇವರು ಅಡಿಕೆ ಹಾಗೂ ತೆಂಗು ಗಿಡಗಳಿಗೆ ಬರುವ ರೋಗಗಳು ಹಾಗೂ ಅದನ್ನು ನಿಯಂತ್ರಣ ಮಾಡುವ ವಿಧಾನ ಗಿಡಗಳಿಗೆ ಗೊಬ್ಬರ ಹಾಕುವ ಸಮರ್ಪಕ ವಿಧಾನಗಳು ಬೋರ್ಡೋ ದ್ರಾವಣದ ಮಿಶ್ರಣ ಹಾಗೂ ಅದರ ಪ್ರಾತ್ಯಕ್ಷಿಕೆಯನ್ನು ಮನಮುಟ್ಟುವಂತೆ ರೈತರಿಗೆ ತಿಳಿಸಿದರು. ಪಶುಸಖಿ ಏಕಲತಾ ಇವರು ಪಶು ಇಲಾಖೆಯ ಮಾಹಿತಿ ನೀಡಿದರು.

ಸಭೆಯಲ್ಲಿ ಪಂಚಾಯತ್ ಸದಸ್ಯರಾದ ಶಶಿಕಲಾ ದೇವಪ್ಪ ಗೌಡ , ಮಾಜಿ ಸದಸ್ಯರಾದ ಮಂಜಪ್ಪ ಬಂಗೇರ, ಹಿರಿಯರಾದ ಕೊರಗಪ್ಪ ಗೌಡ , ರೈತರು, ರೈತ ಮಹಿಳೆಯರು ಭಾಗವಹಿಸಿದ್ದರು . ರಾಜೇಶ್ವರಿ ಚಂದ್ರಕಾಂತ್ ಸ್ವಾಗತಿಸಿದರು.

Related posts

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya
error: Content is protected !!