September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

ವೇಣೂರು: ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆಯು ಘಟಕದ ಅಧ್ಯಕ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಥಾಪಕಾಧ್ಯಕ್ಷ ನಿತೀಶ್ ಹೆಚ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು.
ಮಹಾಸಭೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕ ಅರುಣ್ ಕೋಟ್ಯಾನ್, ಘಟಕದ ಸಲಹೆಗಾರರಾದ ನವೀನ್ ಪಚ್ಚೇರಿ, ಯೋಗೀಶ್ ಬಿಕ್ರೊಟ್ಟು, ರಾಕೇಶ್ ಮೂಡುಕೋಡಿಯವರ ಉಪಸ್ಥಿತಿಯಲ್ಲಿ ವೇಣೂರು ಲಯನ್ಸ್ ಭವನದಲ್ಲಿ ನಡೆಯಿತು.


ನಿಯೋಜಿತ ಅಧ್ಯಕ್ಷರಾಗಿ ಯುವ ಉದ್ಯಮಿ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು ನಾರಾವಿ, ಪ್ರ. ಕಾರ್ಯದರ್ಶಿಯಾಗಿ ಶ್ರೀಮತಿ ದಕ್ಷಾ ಅಂಡಿAಜೆ, ಕೋಶಾಧಿಕಾರಿಯಾಗಿ ಸತೀಶ್ ಚಿಗುರು, ಉಪಾಧ್ಯಕ್ಷರುಗಳಾಗಿ ಸತೀಶ್ ಉಜಿರ್ದಡ್ಡ, ಯುವನ್ಯಾಯವಾದಿ ಸತೀಶ್ ಪಿ.ಎನ್, ಜೊತೆ ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪೂಜಾರಿ ಮತ್ತು ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು.


ಗುರುವರ್ಯರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಕಾರ್ಯದರ್ಶಿ ರಕ್ಷಿತ್ ಬಂಗೇರ ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶ್ರೀಮತಿ ದಕ್ಷ ವಂದಿಸಿದರು.

Related posts

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya
error: Content is protected !!