July 24, 2026
ಶಾಲಾ ಕಾಲೇಜು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಂದು (ಆಗಸ್ಟ್ 07) 2025-26 ನೇ ಸಾಲಿನ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು.

ವ್ಯಕ್ತಿತ್ವ ವಿಕಸನ ತರಬೇತುದಾರ, ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಸೈಕಾಲಜಿ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಒತ್ತಡ ನಿಭಾಯಿಸುವ ಸಾಮರ್ಥ್ಯ, ಸಮಯದ ನಿರ್ವಹಣೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಅವರು ಮಾಹಿತಿ ನೀಡಿದರು.

ವಿಕಸನ ಹಾಗೂ ಮನೋವಿಜ್ಞಾನಕ್ಕೆ ಸಂಬಂಧಿಸಿದ ವೀಡಿಯೊ ತುಣುಕುಗಳ ಮೂಲಕ ವಿದ್ಯಾರ್ಥಿನಿಯರಿಗೆ ಅರ್ಥ ಆಗುವ ರೀತಿಯಲ್ಲಿ ಮಾಹಿತಿ ನೀಡಿದರು..

ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಿರಿಯ ತರಬೇತಿ ಅಧಿಕಾರಿ ಸಂದ್ಯಾ ಕಾರ್ಯಕ್ರಮ ನಿರೂಪಿಸಿ ಎಲ್ಲರನ್ನೂ ಸ್ವಾಗತಿಸಿದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!