ಬೆಳ್ತಂಗಡಿ: ನಿನ್ನೆ ರಾತ್ರಿ ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳದ ಪಾಂಗಾಳ ಎಂಬಲ್ಲಿ ಯೂ ಟ್ಯೂಬರ್ಸ್ ಮೇಲೆ ನಡೆದಿದ್ದ ಹಲ್ಲೆ ವಿಚಾರದಲ್ಲಿ ವರದಿಗಾಗಿ ಉಜಿರೆ ಖಾಸಗಿ ಆಸ್ಪತ್ರೆ ಬಳಿ ವರದಿಗಾಗಿ ತೆರಳಿದ್ದ ಏಷ್ಯಾ ನೆಟ್ ಸುವರ್ಣ ಚಾನೆಲ್ ವರದಿಗಾರ ಹರೀಶ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಹರೀಶ್ ಅವರು ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ, ಜಯಂತ್ ಟಿ ಸೇರಿ ಹಲವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 115(2), 189(2), 191(2), 351(2), 352, 190 ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿದ್ದಾರೆ.











