July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲ ಘಟಕ ಮತ್ತು ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಇದರ ಆಶ್ರಯದಲ್ಲಿ “ಆರೋಗ್ಯ ಅರಿವು 2025” ಎಂಬ ಹೆಸರಿನಲ್ಲಿ ರಕ್ತ ವರ್ಗಿಕರಣ ಶಿಬಿರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸಂತ ಜಾನರ ಹಿ. ಪ್ರಾ ಶಾಲೆ ಕೊಕ್ಕಡದಲ್ಲಿ ಜರುಗಿತು.

ಉದ್ಘಾಟನೆಯನ್ನು ಕೊಕ್ಕಡದ ವಕೀಲರು ಮತ್ತು ದಸ್ತವೇಜು ಬರಹಗಾರರಾದ ಶ್ರೀಮತಿ ಧನ್ಯ ಕೇವಳ ಹಾಗೂ ಉದ್ಘಾಟಕರ ಭಾಷಣದಲ್ಲಿ ಅವರು ಆರೋಗ್ಯ ಮತ್ತು ರಕ್ತದಾನದ ಮಹತ್ವ ತಿಳಿಸಿದರು.
ಅತಿಥಿಯಾಗಿರುವ ನಾಡೋಳಿ ಡಯಾಗ್ನಸ್ಟಿಕ ಸೆಂಟರ್ನ ಆಡಳಿತ ಮಂಡಳಿಯ ನಿರ್ದೇಶಕರಾದ ಕಾಶೀನಾಥ್ ಅವರು ರಕ್ತದಾನದ ಮಹತ್ವ, ರಕ್ತ ವರ್ಗಿಕರಣದ ಬಗ್ಗೆ ಮತ್ತು ಜೆಸಿಯ ಉದ್ದೇಶವನ್ನು ವಿವರಿಸಿದರು.

ಮುಖ್ಯ ಅತಿಥಿ ಶ್ರೀಮತಿ ಜೇನವಿವ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಆರೋಗ್ಯ ಅರಿವು 2025 ಕಾರ್ಯಕ್ರಮದ ಅಡಿಯಲ್ಲಿ ಹಲವು ಸ್ಪರ್ಧೆಯನ್ನು ಆಯೋಜಿಸಿ, ಸ್ಪರ್ಧೆಯಲ್ಲಿ ವಿಜೇತರದವರಿಗೆ ಬಹುಮಾನ ವಿತರಿಸಲಾಯಿತು. ನಂತರ ಎಲ್ಲಾ ಮಕ್ಕಳ ರಕ್ತ ವರ್ಗಿಕರಣ ಮಾಡಿ ರಕ್ತ ಗುಂಪನ್ನು ಹೇಳಲಾಯಿತು. ಕಾರ್ಯಕ್ರಮದ ಪ್ರಯೋಜಕರಾದ ಜೆಸಿಂತಾ ಡೆಸೋಜ ಉದ್ಘಾಟಕರ ಪರಿಚಯವನ್ನು ವಾಚಿಸಿದರು ಹಾಗೂ ಶಾಲೆಗೆ ನೆನಪಿನ ಕಿಟ್ ನ್ನು ನೀಡಿದರು.


ಜೆಸಿ ಧನುಷ್ ಮತ್ತು ಜೇಸಿಂತಾ ಡೆಸೋಜಾ ಕಾರ್ಯಕ್ರಮದ ಕುರಿತು ಅನಿಸಿಕೆ ಹೇಳಿದರು. ಮಾರ್ಗದರ್ಶಕರಾದ ಜೋಸೆಫ್ ಪಿರೇರಾ, ಪೂರ್ವಧ್ಯಕ್ಷ ಶ್ರೀದರ್ ರಾವ್, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ ಜೈನ್, ಕಾರ್ಯಕ್ರಮದ ನಿರ್ದೇಶಕರಾದ ಜೆಸಿ ವಿಕ್ಟರ್, ಜೆಸಿ ದೀಪಾ, ಜೆಸಿ ಆಯುಷ್ ಜೈನ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ನಾಡೋಳಿ ಡಯಾಗ್ನಸ್ಟಿಕ ಸೆಂಟರ್ ಉದ್ಯೋಗಿಗಳಾದ ತೃಪ್ತಿ ಮತ್ತು ರೂಪರ್ಷಿ ಉಪಸ್ಥಿತರಿದ್ದರು.

ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜೆಸಿಐ ಕುಟುಂಬದ ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಉದ್ದೇಶಕ್ಕೆ ಸಾಥ್ ನೀಡಿದರು. ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷೆ ಶೋಭಾ ಪಿ ಸ್ವಾಗತಿದರು. ಜೆಸಿ ವಾಣಿಯನ್ನು ಜೆಸಿ ಜೋಯೆಲ್ ಪೀರೆರಾ ವಾಚಿಸಿ , ಕಾರ್ಯದರ್ಶಿ ಚಂದನಾ ಜೈನ್ ವಂದಿಸಿದರು.

Related posts

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya
error: Content is protected !!