September 6, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಹಾಗೂ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗು ಸಾರ್ವಜನಿಕರಲ್ಲಿ ಅಪಾಯದ ಬೀತಿಯನ್ನುಂಟುವಂತಹ ಹೇಳಿಕೆಗಳನ್ನು ಪ್ರಚಾರ ಮಾಡಿರುವ ವಿಷಯದಲ್ಲಿ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ (32) ಎಂಬವರು ನೀಡಿದ ದೂರಿನಂತೆ ಗಿರೀಶ್ ಮಟ್ಟಣ್ಣವರ್ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.6 ರಂದು ರಾತ್ರಿ ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ, ಗಿರೀಶ್ ಮಟ್ಟಣ್ಣವರ್ ರವರು ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ, ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿರುವ ವೀಡಿಯೋವನ್ನು ಪೇಸ್ಬುಕ್‌ ನಲ್ಲಿ ಪ್ರಸಾರಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ಚರಣ್ ಶೆಟ್ಟಿ ಎಂಬವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಠಾಣಾ ಅಕ್ರ: 78/2025 ಕಲಂ:57, 296 ಜೊತೆಗೆ 190 ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಆ. 7 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ನೋಡುತ್ತಿದ್ದಾಗ, ಮಹೇಶ್ ತಿಮರೋಡಿರವರು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್ ನಲ್ಲಿ, ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗು ಸಾರ್ವಜನಿಕರಲ್ಲಿ ಅಪಾಯದ ಬೀತಿಯನ್ನುಂಟುವಂತಹ ಹೇಳಿಕೆಗಳನ್ನು ಪ್ರಚಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ಚರಣ್ ಶೆಟ್ಟಿ ಎಂಬವರು ದೂರಿನ ಮೇರೆಗೆ ಬೆಳ್ತಂಗಡಿ ಠಾಣಾ ಅಕ್ರ: 79/2025 ಕಲಂ: 353(2) ಬಿಎನ್ಎಸ್ -2023ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಬದ್ಯಾರು ಸಮೀಪ ಆಟೋ ಪಲ್ಟಿ, ರಿಕ್ಷಾದಲ್ಲಿದ್ದ ಯುವಕ ಧಾರುಣ ಸಾವು

Suddi Udaya
error: Content is protected !!