25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

ಬೆಳ್ತಂಗಡಿ: ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ಮೈಸೂರು ಇದರ ವತಿಯಿಂದ ಆ.16 ರಿಂದ ಆ.18ರವರೆಗೆ ಮೈಸೂರಿನಲ್ಲಿ ನಡೆಯಲಿರುವ `ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ’ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ಕೆ. ಅವರು ಆಯ್ಕೆಯಾಗಿದ್ದಾರೆ.

ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆಯು ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ವಿಷಯದ ಕುರಿತು ನಾಲ್ಕು ದಿನಗಳ ತರಬೇತಿಯನ್ನು ನೀಡಲಿದ್ದು, ಸದರಿ ತರಬೇತುದಾರರ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ತರಬೇತಿ ನೀಡುವ ಸಾಮರ್ಥ್ಯ ಹೊಂದಿರುವ ಮತ್ತು ಸಂವಹನ ಕೌಶಲ್ಯವಿರುವ ಒಬ್ಬರು ಗ್ರಾಮ ಪಂಚಾಯತಿ ಮಹಿಳಾ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ದ.ಕ ಜಿಲ್ಲಾ ಪಂಚಾಯತಿಗೆ ಪತ್ರ ಬಂದಿದ್ದು, ದ.ಕ ಜಿಲ್ಲಾ ಪಂಚಾಯತ್ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಅನಿತಾ ಕೆ. ಇವರನ್ನು ಆಯ್ಕೆ ಮಾಡಿದೆ. ದ.ಕ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಮಹಿಳಾ ಅಧ್ಯಕ್ಷೆ ಎಂಬ ಕೀರ್ತಿಗೆ ಅನಿತಾ ಕೆ. ಅವರು ಪಾತ್ರರಾಗಿದ್ದು, ಅವರು ತರಬೇತಿಯಲ್ಲಿ ಭಾಗವಹಿಸಲಿದ್ದಾರೆ.

Related posts

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya
error: Content is protected !!