25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

ಬೆಳ್ತಂಗಡಿ: ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ಮೈಸೂರು ಇದರ ವತಿಯಿಂದ ಆ.16 ರಿಂದ ಆ.18ರವರೆಗೆ ಮೈಸೂರಿನಲ್ಲಿ ನಡೆಯಲಿರುವ `ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ’ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ಕೆ. ಅವರು ಆಯ್ಕೆಯಾಗಿದ್ದಾರೆ.

ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆಯು ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ವಿಷಯದ ಕುರಿತು ನಾಲ್ಕು ದಿನಗಳ ತರಬೇತಿಯನ್ನು ನೀಡಲಿದ್ದು, ಸದರಿ ತರಬೇತುದಾರರ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ತರಬೇತಿ ನೀಡುವ ಸಾಮರ್ಥ್ಯ ಹೊಂದಿರುವ ಮತ್ತು ಸಂವಹನ ಕೌಶಲ್ಯವಿರುವ ಒಬ್ಬರು ಗ್ರಾಮ ಪಂಚಾಯತಿ ಮಹಿಳಾ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ದ.ಕ ಜಿಲ್ಲಾ ಪಂಚಾಯತಿಗೆ ಪತ್ರ ಬಂದಿದ್ದು, ದ.ಕ ಜಿಲ್ಲಾ ಪಂಚಾಯತ್ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಅನಿತಾ ಕೆ. ಇವರನ್ನು ಆಯ್ಕೆ ಮಾಡಿದೆ. ದ.ಕ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಮಹಿಳಾ ಅಧ್ಯಕ್ಷೆ ಎಂಬ ಕೀರ್ತಿಗೆ ಅನಿತಾ ಕೆ. ಅವರು ಪಾತ್ರರಾಗಿದ್ದು, ಅವರು ತರಬೇತಿಯಲ್ಲಿ ಭಾಗವಹಿಸಲಿದ್ದಾರೆ.

Related posts

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya
error: Content is protected !!