July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

ಬೆಳ್ತಂಗಡಿ: ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ಮೈಸೂರು ಇದರ ವತಿಯಿಂದ ಆ.16 ರಿಂದ ಆ.18ರವರೆಗೆ ಮೈಸೂರಿನಲ್ಲಿ ನಡೆಯಲಿರುವ `ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ’ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ಕೆ. ಅವರು ಆಯ್ಕೆಯಾಗಿದ್ದಾರೆ.

ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆಯು ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ವಿಷಯದ ಕುರಿತು ನಾಲ್ಕು ದಿನಗಳ ತರಬೇತಿಯನ್ನು ನೀಡಲಿದ್ದು, ಸದರಿ ತರಬೇತುದಾರರ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ತರಬೇತಿ ನೀಡುವ ಸಾಮರ್ಥ್ಯ ಹೊಂದಿರುವ ಮತ್ತು ಸಂವಹನ ಕೌಶಲ್ಯವಿರುವ ಒಬ್ಬರು ಗ್ರಾಮ ಪಂಚಾಯತಿ ಮಹಿಳಾ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ದ.ಕ ಜಿಲ್ಲಾ ಪಂಚಾಯತಿಗೆ ಪತ್ರ ಬಂದಿದ್ದು, ದ.ಕ ಜಿಲ್ಲಾ ಪಂಚಾಯತ್ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಅನಿತಾ ಕೆ. ಇವರನ್ನು ಆಯ್ಕೆ ಮಾಡಿದೆ. ದ.ಕ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಮಹಿಳಾ ಅಧ್ಯಕ್ಷೆ ಎಂಬ ಕೀರ್ತಿಗೆ ಅನಿತಾ ಕೆ. ಅವರು ಪಾತ್ರರಾಗಿದ್ದು, ಅವರು ತರಬೇತಿಯಲ್ಲಿ ಭಾಗವಹಿಸಲಿದ್ದಾರೆ.

Related posts

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya
error: Content is protected !!