25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಹಾಗೂ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ ಉಜಿರೆ ಇವರ ಸಹಯೋಗದಲ್ಲಿ ಒಂದು ದಿನದ ರೈತ ತರಬೇತಿ ಕಾರ್ಯಕ್ರಮ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಅರ್ಚಕರಾದ ಕೃಷ್ಣ ಹೊಳ್ಳ ರವರ ಅಧ್ಯಕ್ಷತೆಯಲ್ಲಿ ಆ.6ರಂದು ನಡೆಯಿತು.

ಕೃಷಿ ಸಖಿ ಭಾಗೀರಥಿ ಇವರು ವಾಸ್ತವಿಕವಾಗಿ ಮಾತಾಡಿ ಬೆಳೆ ವಿಮೆ ಬೆಳೆ ಸಮೀಕ್ಷೆಯ ಬಗ್ಗೆ ಹಾಗೂ ರೈತ ತರಬೇತಿಯ ಮಹತ್ವವನ್ನು ತಿಳಿಸಿದರು.

ಸಭೆಯನ್ನು ಉದ್ಘಾಟಿಸಿ ಮಾತಾಡಿದ ಅರ್ಚಕರಾದ ಕೃಷ್ಣ ಹೊಳ್ಳ ಇದು ಬಹಳ ಉತ್ತಮವಾದ ಕಾರ್ಯಕ್ರಮ ನಾವು ರೈತರು ಮಾಡುವ ತಪ್ಪುಗಳನ್ನು ತಿದ್ದಿಕೊಂಡು ಇಂತಹ ತರಬೇತಿಯಲ್ಲಿ ಮಾಹಿತಿ ಪಡೆದು ಅಭಿವೃದ್ಧಿ ಹೊಂದಬೇಕು ಎಂದು ಶುಭ ಹಾರೈಸಿದರು. ಕೃಷಿ ಇಲಾಖೆಯ ನವನೀತ ಮಾತಾಡಿ , ನ್ಯಾಚುರಲ್ ಫಾರ್ಮಿಂಗ್ ಬೆಳೆ ಸಮೀಕ್ಷೆ ಬೆಳೆ ವಿಮೆ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳು ಹಾಗೂ ಅದನ್ನು ಪಡೆದುಕೊಳ್ಳುವ ವಿಧಾನಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾದ ಪ್ರಭಾಕರಮಯ್ಯ ಇವರು ಅಡಿಕೆ ಹಾಗೂ ತೆಂಗು ಗಿಡಗಳಿಗೆ ಬರುವ ರೋಗಗಳು ಹಾಗೂ ಅದನ್ನು ನಿಯಂತ್ರಣ ಮಾಡುವ ವಿಧಾನ ಗಿಡಗಳಿಗೆ ಗೊಬ್ಬರ ಹಾಕುವ ಸಮರ್ಪಕ ವಿಧಾನಗಳು ಬೋರ್ಡೋ ದ್ರಾವಣದ ಮಿಶ್ರಣ ಹಾಗೂ ಅದರ ಪ್ರಾತ್ಯಕ್ಷಿಕೆಯನ್ನು ಮನಮುಟ್ಟುವಂತೆ ರೈತರಿಗೆ ತಿಳಿಸಿದರು. ಪಶುಸಖಿ ಏಕಲತಾ ಇವರು ಪಶು ಇಲಾಖೆಯ ಮಾಹಿತಿ ನೀಡಿದರು.

ಸಭೆಯಲ್ಲಿ ಪಂಚಾಯತ್ ಸದಸ್ಯರಾದ ಶಶಿಕಲಾ ದೇವಪ್ಪ ಗೌಡ , ಮಾಜಿ ಸದಸ್ಯರಾದ ಮಂಜಪ್ಪ ಬಂಗೇರ, ಹಿರಿಯರಾದ ಕೊರಗಪ್ಪ ಗೌಡ , ರೈತರು, ರೈತ ಮಹಿಳೆಯರು ಭಾಗವಹಿಸಿದ್ದರು . ರಾಜೇಶ್ವರಿ ಚಂದ್ರಕಾಂತ್ ಸ್ವಾಗತಿಸಿದರು.

Related posts

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya
error: Content is protected !!