July 23, 2026
ಶಾಲಾ ಕಾಲೇಜು

ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಐಸ್ ಬ್ರೇಕ್’ ಕಾರ್ಯಕ್ರಮ

ಉಜಿರೆ :ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಪರಸ್ಪರ ಅರಿತು ಮುನ್ನಡೆಯುವುದಕ್ಕೆ ಪೂರಕವಾದ ‘ಐಸ್ ಬ್ರೇಕ್’ ಕಾರ್ಯಕ್ರಮ ಇಂದು (ಆ.7) ನಡೆಯಿತು.
ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಲಾಕೇಂದ್ರದ ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಾವೆಲ್ಲರೂ ಕ್ರಿಯಾಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ನಮ್ಮಲ್ಲಿ ಯಾವುದೇ ಭೇದ-ಭಾವ ಇಟ್ಟುಕೊಳ್ಳದೆ ನಾವೆಲ್ಲಾ ಒಂದೇ ಎಂಬ ಮನೋಭಾವದಿಂದ ಕೆಲಸ ಕಾರ್ಯಗಳನ್ನು ಮಾಡಬೇಕು. ಆಗ ಯಶಸ್ಸು ಖಂಡಿತ” ಎಂದರು.

ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನೆಯ ಆಟ ಆಡಿಸುವ ಜೊತೆಗೆ, ಕೈ ಮುಗಿದು ನಮಸ್ಕಾರ ಮಾಡುವ ಉದ್ದೇಶ, ಅರ್ಥ ತಿಳಿಸಿದರಲ್ಲದೆ, ಕಾರ್ಯಕ್ರಮ ಸಂಯೋಜನೆ, ಸ್ವಾಗತ ಹಾಗೂ ಧನ್ಯವಾದ ಸಮರ್ಪಿಸುವ ರೀತಿ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು.

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸ್ವಾಗತಿಸಿದರು. ಪ್ರಮಿತ ಮತ್ತು ಪೌಜಿಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya
error: Content is protected !!