32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27 ನೇ ವರ್ಷದ ಭಜನಾ ತರಬೇತಿ ಕಮ್ಮಟವು ಸೆ. 14 ರಿಂದ 21 ರವರೆಗೆ ನಡೆಯಲಿದ್ದು ಇದರ ಪೂರ್ವಬಾವಿ ಸಭೆಯು ಬೆಳ್ತಂಗಡಿ ಮಂಜುನಾಥೇಶ್ವರ ಸಭಾ ಭವನದಲ್ಲಿ ನಡೆಯಿತು.


ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ಕೋಟ್ಯಾಂತರ ಭಕ್ತರ ಆರಾಧ್ಯ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಮಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಎಂದು ತೀರ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಅಧ್ಯಕ್ಷ ವೆಂಕಟೇಶ್ ಭಟ್ ಕಜೆ,
ಪ್ರಗತಿಬಂಧು ಒಕ್ಕೂಟ ಕೇಂದ್ರ ಸಮಿತಿ ಅಧ್ಯಕ್ಷರಾದ ಸೀತಾರಾಮ್, ಬೆಳ್ತಂಗಡಿ ಯೋಜನಾಧಿಕಾರಿಗಳಾದ ಯಶೋಧರ್, ಹಾಗೂ ಗುರುವಾಯನಕೆರೆ ಯೋಜನಾಧಿಕಾರಿಗಳಾದ ಅಶೋಕ್ ಬಿ, ಹರೀಶ್ ಕುಮಾರ್,ಜಗದೀಶ್ ರೈ ಮೈರಾ, ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಎಲ್ಲಾ ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.

ಕುಮಾರಿ ಮಾನ್ಯ ಪ್ರಾರ್ಥನೆ ಹಾಡಿದರು. ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

Related posts

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!