ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27 ನೇ ವರ್ಷದ ಭಜನಾ ತರಬೇತಿ ಕಮ್ಮಟವು ಸೆ. 14 ರಿಂದ 21 ರವರೆಗೆ ನಡೆಯಲಿದ್ದು ಇದರ ಪೂರ್ವಬಾವಿ ಸಭೆಯು ಬೆಳ್ತಂಗಡಿ ಮಂಜುನಾಥೇಶ್ವರ ಸಭಾ ಭವನದಲ್ಲಿ ನಡೆಯಿತು.


ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ಕೋಟ್ಯಾಂತರ ಭಕ್ತರ ಆರಾಧ್ಯ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಮಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಎಂದು ತೀರ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಅಧ್ಯಕ್ಷ ವೆಂಕಟೇಶ್ ಭಟ್ ಕಜೆ,
ಪ್ರಗತಿಬಂಧು ಒಕ್ಕೂಟ ಕೇಂದ್ರ ಸಮಿತಿ ಅಧ್ಯಕ್ಷರಾದ ಸೀತಾರಾಮ್, ಬೆಳ್ತಂಗಡಿ ಯೋಜನಾಧಿಕಾರಿಗಳಾದ ಯಶೋಧರ್, ಹಾಗೂ ಗುರುವಾಯನಕೆರೆ ಯೋಜನಾಧಿಕಾರಿಗಳಾದ ಅಶೋಕ್ ಬಿ, ಹರೀಶ್ ಕುಮಾರ್,ಜಗದೀಶ್ ರೈ ಮೈರಾ, ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಎಲ್ಲಾ ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.

ಕುಮಾರಿ ಮಾನ್ಯ ಪ್ರಾರ್ಥನೆ ಹಾಡಿದರು. ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!