ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

ಬೆಳ್ತಂಗಡಿ: ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ಮೈಸೂರು ಇದರ ವತಿಯಿಂದ ಆ.16 ರಿಂದ ಆ.18ರವರೆಗೆ ಮೈಸೂರಿನಲ್ಲಿ ನಡೆಯಲಿರುವ `ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ’ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ಕೆ. ಅವರು ಆಯ್ಕೆಯಾಗಿದ್ದಾರೆ.

ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆಯು ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ವಿಷಯದ ಕುರಿತು ನಾಲ್ಕು ದಿನಗಳ ತರಬೇತಿಯನ್ನು ನೀಡಲಿದ್ದು, ಸದರಿ ತರಬೇತುದಾರರ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ತರಬೇತಿ ನೀಡುವ ಸಾಮರ್ಥ್ಯ ಹೊಂದಿರುವ ಮತ್ತು ಸಂವಹನ ಕೌಶಲ್ಯವಿರುವ ಒಬ್ಬರು ಗ್ರಾಮ ಪಂಚಾಯತಿ ಮಹಿಳಾ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ದ.ಕ ಜಿಲ್ಲಾ ಪಂಚಾಯತಿಗೆ ಪತ್ರ ಬಂದಿದ್ದು, ದ.ಕ ಜಿಲ್ಲಾ ಪಂಚಾಯತ್ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಅನಿತಾ ಕೆ. ಇವರನ್ನು ಆಯ್ಕೆ ಮಾಡಿದೆ. ದ.ಕ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಮಹಿಳಾ ಅಧ್ಯಕ್ಷೆ ಎಂಬ ಕೀರ್ತಿಗೆ ಅನಿತಾ ಕೆ. ಅವರು ಪಾತ್ರರಾಗಿದ್ದು, ಅವರು ತರಬೇತಿಯಲ್ಲಿ ಭಾಗವಹಿಸಲಿದ್ದಾರೆ.

Related posts

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya
error: Content is protected !!