22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8 ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ 15 ನೇ ಸ್ಥಳದಲ್ಲಿ ಶವದ ಅವಶೇಷಗಳ ಶೋಧ ಕಾರ್ಯವನ್ನು ನಡೆಸಿದ್ದು, ಶವದ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಆ.8ರಂದು ನೇತ್ರಾವತಿ ಸ್ನಾನ ಘಟ್ಟದ ಬಳಿ ಡ್ಯಾಮನ ಬಳಿಯ 13ನೇ ಸ್ಥಳದಲ್ಲಿ ಉತ್ಖನನ ಕಾರ್ಯ ನಡೆಸಬಹುದೆಂದು ನಿರೀಕ್ಷಿಸಲಾಗಿತ್ತು.
ಆದರೆ ಇಂದು ಬೆಳಿಗ್ಗೆ ದೂರುದಾರನ ಜೊತೆ ಎಸ್ ಐಟಿ ತಂಡ ಮಧ್ಯಾಹ್ನದ ಸಮಯ ಧರ್ಮಸ್ಥಳ ಬಳಿಯ ಬೋಳಿಯಾರ್ ಎಂಬಲ್ಲಿಗೆ ಬಂದಿದ್ದು, ಅಲ್ಲಿ ಕಾಡಿನೊಳಗೆ ದೂರುದಾರನ ಜೊತೆ ತೆರಳಿ ಅಲ್ಲಿ ಅನಾಮಿಕ ದೂರುದಾರ ಗುರುತಿಸಿದ ಸ್ಥಳದಲ್ಲಿ ಯಾವುದೇ ಶವದ ಕಳೆಬರಹಗಳು ಪತ್ತೆಯಾಗಿಲ್ಲ ಎಂದು ಮಾಹಿತಿ ಲಭ್ಯವಾಗಿದೆ. ಎಸ್‌ಐಟಿ ತಂಡ ಕಾರ್ಯಾಚರಣೆಯನ್ನು ಕೊನೆಗೊಳಿಸಿ ಹಿಂದಿರುಗಿದೆ.

Related posts

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya
error: Content is protected !!