23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8 ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ 15 ನೇ ಸ್ಥಳದಲ್ಲಿ ಶವದ ಅವಶೇಷಗಳ ಶೋಧ ಕಾರ್ಯವನ್ನು ನಡೆಸಿದ್ದು, ಶವದ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಆ.8ರಂದು ನೇತ್ರಾವತಿ ಸ್ನಾನ ಘಟ್ಟದ ಬಳಿ ಡ್ಯಾಮನ ಬಳಿಯ 13ನೇ ಸ್ಥಳದಲ್ಲಿ ಉತ್ಖನನ ಕಾರ್ಯ ನಡೆಸಬಹುದೆಂದು ನಿರೀಕ್ಷಿಸಲಾಗಿತ್ತು.
ಆದರೆ ಇಂದು ಬೆಳಿಗ್ಗೆ ದೂರುದಾರನ ಜೊತೆ ಎಸ್ ಐಟಿ ತಂಡ ಮಧ್ಯಾಹ್ನದ ಸಮಯ ಧರ್ಮಸ್ಥಳ ಬಳಿಯ ಬೋಳಿಯಾರ್ ಎಂಬಲ್ಲಿಗೆ ಬಂದಿದ್ದು, ಅಲ್ಲಿ ಕಾಡಿನೊಳಗೆ ದೂರುದಾರನ ಜೊತೆ ತೆರಳಿ ಅಲ್ಲಿ ಅನಾಮಿಕ ದೂರುದಾರ ಗುರುತಿಸಿದ ಸ್ಥಳದಲ್ಲಿ ಯಾವುದೇ ಶವದ ಕಳೆಬರಹಗಳು ಪತ್ತೆಯಾಗಿಲ್ಲ ಎಂದು ಮಾಹಿತಿ ಲಭ್ಯವಾಗಿದೆ. ಎಸ್‌ಐಟಿ ತಂಡ ಕಾರ್ಯಾಚರಣೆಯನ್ನು ಕೊನೆಗೊಳಿಸಿ ಹಿಂದಿರುಗಿದೆ.

Related posts

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya
error: Content is protected !!